ಬಂಟ್ವಾಳ

ನರಿಕೊಂಬು ಗ್ರಾಮದ 120 ಮಂದಿಗೆ ಆಹಾರ ಕಿಟ್ ವಿತರಣೆ

ಜಾಹೀರಾತು

ಮಂಗಳೂರು ರಥಬೀದಿಯ ಡಾ. ಪಿ.ದಯಾನಂದ ಪೈ, ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಮೂಲಕ  ಮಂಗಳೂರು ಇಸ್ಕಾನ್ ನ ಅಕ್ಷಯ ಪಾತ್ರೆ ಕೊಡುಗೆಯಾಗಿ ನೀಡಿದ ಆಹಾರ ಕಿಟ್ ಅನ್ನು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಸಭಾಂಗಣದಲ್ಲಿ 120 ಮಂದಿಗೆ ವಿತರಿಸಲಾಯಿತು.

ಅಕ್ಷಯ ಪಾತ್ರೆಯ ದ.ಕ. ಉಡುಪಿ ಕೋವಿಡ್  ರಿಲೀಫ್ ನ ಸಂಯೋಜಕ ಹಾಗೂ ಇಸ್ಕಾನ್ ದೇವಸ್ಥಾನದ ಕಾರ್ಯದರ್ಶಿ ಸನಂದನ ದಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಹಾರ ಎನ್ನುವುದುದೇವರು ಕೊಟ್ಟ ಕೊಡುಗೆ. ದೇವರ ಪ್ರಸಾದ ಹಂಚುವ ಕಾರ್ಯವನ್ನು ಇಸ್ಕಾನ್ ಮಾಡುತ್ತಿದೆ ಎಂದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇಸ್ಕಾನ್ ಅಕ್ಷಯಪಾತ್ರೆ ಸಂಯೋಜಕ ಸಂತೋಷ್, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಪರಿಷತ್ತಿನ ಜಿಲ್ಲಾಧ್ಯಕ್ಷ ವೇದಮೂರ್ತಿ ಕರ್ಬೆಟ್ಟು ಕೃಷ್ಣರಾಜ ಭಟ್ , ಸ್ಥಳೀಯ ವೈದ್ಯ ಡಾ. ಸುಬ್ರಹ್ಮಣ್ಯ ಟಿ ಉಪಸ್ಥಿತರಿದ್ದರು. ಮಂಗಳೂರು ರಥಬೀದಿಯ ಡಾ. ಪಿ.ದಯಾನಂದ ಪೈ, ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ರಾಜಶೇಖರ ಹೆಬ್ಬಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಾಲೇಜಿನ ರೋವರ್ಸ್ ಘಟಕದ ಸಂಯೋಜಕ  ಪ್ರೊ. ಪುರುಷೋತ್ತಮ ಭಟ್ ಕಾರ್ಯಕ್ರಮ ನಿರೂಪಿಸಿದರು. ರೇಂಜರ್ಸ್ ಘಟಕ ಸಂಯೋಜಕಿ ಡಾ. ಶೈಲಾರಾಣಿ ವಂದಿಸಿದರು. ಮಹಿತಾ ಭಟ್ ಪ್ರಾರ್ಥಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ