ಬ್ರಹ್ಮರಕೂಟ್ಲುವಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಅನಾವರಣ

ಜಾಹೀರಾತು

ಬಂಟ್ವಾಳ: ವಿಹಿಂಪ, ಬಜರಂಗದಳ ಛತ್ರಪತಿ ಶಾಖೆ, ಬ್ರಹ್ಮರಕೂಟ್ಲು ಘಟಕ ಇದರ ವತಿಯಿಂದ ಬ್ರಹ್ಮರಕೂಟ್ಲುವಿನಲ್ಲಿ ನಿರ್ಮಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಭಾನುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅನಾವರಣಗೊಳಿಸಿದರು. ಶಿವಾಜಿ ಮಹಾರಾಜರ ಪ್ರತಿಮೆ ಕಣ್ಣೆದುರು ಕಂಡಾಗ ಯುವಕರ ಮನಸ್ಸಿನಲ್ಲಿ ತನ್ನಿಂತಾನೇ ಶಿವಾಜಿ ಮಹಾರಾಜರ ಆದರ್ಶ ಗುಣಗಳು ಜಾಗೃತವಾಗಿ, ಹಿಂದೂ ಸಮಾಜವನ್ನು ಒಗ್ಗೂಡಿಸಿ ಮುನ್ನಡೆಸುವ ನಾಯಕತ್ವ ಗುಣ ಮೈಗೂಡಿಸಿಕೊಳ್ಳಲು ಸಹಕಾರಿಯಾಗುವುದು ಎಂದು ಶಾಸಕರು ಆಶಯವನ್ನು ವ್ಯಕ್ತಪಡಿಸಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ತಾಪಂ ಸದಸ್ಯ ಗಣೇಶ್ ಸುವರ್ಣ,ವಿಹಿಂಪ ಬಜರಂಗದಳ ಪ್ರಮುಖರಾದ ಶರಣ್ ಪಂಪ್ ವೆಲ್, ಅಶೋಕ್ ಶೆಟ್ಟಿ ಸರಪಾಡಿ, ಗುರುರಾಜ್ ಬಂಟ್ವಾಳ, ಭೋಜ ಪೂಜಾರಿ ದರಿಬಾಗಿಲು, ಹಿಂದೂ ಜಾಗರಣ ವೇದಿಕೆ ಪ್ರಮುಖರಾದ ವಿಜಯ್ ತುಂಬೆ, ಯೋಗೀಶ್ ಕಡೆಗೋಳಿ, ಸುಶಾನ್ ಬೊಳ್ಳಾರಿ, ಪ್ರಮುಖರಾದ ಸುರೇಶ್ ಶಿವಾಜಿನಗರ , ಅನಿಲ್ ಕುಮಾರ್ ಪಂಡಿತ್, ಸಂಪ್ರೀತ್ ಆಯರಗುಡ್ಡೆ, ಮನೋಜ್ ವಳವೂರು, ಮನೋಹರ ಕಂಜತ್ತೂರು, ಅಜಿತ್ ವಳವೂರು, ಪ್ರಸಾದ್ ವಳವೂರು, ಸಮ್ಮಿತ್ ಬ್ರಹ್ಮರಕೂಟ್ಲು, ಸುಶಾಂತ್ ವಳವೂರು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬ್ರಹ್ಮರಕೂಟ್ಲುವಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಅನಾವರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*