ಬಂಟ್ವಾಳ

ಸುರೇಂದ್ರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ: ಭಂಡಾರಿ ಸಮಾಜ ಒತ್ತಾಯ

ಜಾಹೀರಾತು

ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಹತ್ಯೆಯಾದ ಸುರೇಂದ್ರ ಬಂಟ್ವಾಳ್ ಅವರ ಹತ್ಯೆಯ ಎಲ್ಲಾ ಆರೋಪಿಗಳನ್ನು ತತ್‌ಕ್ಷಣ ಬಂಧಿಸಿ ಕಠಿನ ಶಿಕ್ಷೆಗೊಳಪಡಿಸಬೇಕು ಎಂದು ಬಂಟ್ವಾಳ ಭಂಡಾರಿ ಸಮಾಜ ಸಂಘ ಬಂಟ್ವಾಳ ಡಿವೈಎಸ್‌ಪಿ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಬಂಟ್ವಾಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಕಕ್ಕೆಪದವು ಪುಣ್ಕೆದಡಿ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಮಂಗಳವಾರ ಡಿವೈಎಸ್‌ಪಿ ಕಚೇರಿಗೆ ಭೇಟಿ ನೀಡಿ, ಸಮಾಜದ ದಾನಿಯಾಗಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರು ಚಲನಚಿತ್ರ ನಟರಾಗಿ, ಗಣ್ಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ನಾವು ಅವರ ಹತ್ಯೆಯನ್ನು ಖಂಡಿಸುತ್ತಿದ್ದು, ಜತೆಗೆ ಆರೋಪಿಗಳನ್ನು ಕಠಿನ ಶಿಕ್ಷಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.