ಜಾಹೀರಾತು
ಬಂಟ್ವಾಳ: ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿವಿಲ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ಗೂಡ್ಸ್ ಟೆಂಪೊ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಕಲ್ಲಡ್ಕ ನಿವಾಸಿ ವಸಂತ ಕೆ. (55) ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ. ಬಿ.ಸಿ.ರೋಡಿನಲ್ಲಿ ಕಚೇರಿಯನ್ನು ಸುಮಾರು 25 ವರ್ಷಗಳಿಂದ ಹೊಂದಿದ್ದು, ಸಿವಿಲ್ ಇಂಜಿನಿಯರಿಂಗ್ ವೃತ್ತಿಯಲ್ಲಿದ್ದರು. 2000-01ರಲ್ಲಿ ಅವರು ಬಂಟ್ವಾಳ ಯುವವಾಹಿನಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಇಂಜಿನಿಯರ್ ಬಲಿ"