ಬಂಟ್ವಾಳ

ಹಡಿಲು ಭೂಮಿಯ ಗುರುತಿಸಿ, ನೀರು ನಿಲ್ಲುವ ಜಾಗ ಸರ್ವೆ ಮಾಡಿಸಿ: ಶಾಸಕ ರಾಜೇಶ್ ನಾಯ್ಕ್ ಸೂಚನೆ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಶಂಭೂರು ಸಹಿತ ನದಿ ತೀರದ ಮುಳುಗಡೆ ಪ್ರದೇಶಗಳನ್ನು ಸರ್ವೆ ಮಾಡಿ ಅವುಗಳನ್ನು ಸದುಪಯೋಗಪಡಿಸಿ, ತಾಲೂಕಿನ ಜಾನುವಾರುಗಳಿಗೆ ಬೇಕಾಗಿರುವ ರಸಮೇವಿಗೆ ಅಗತ್ಯವಿರುವ ಮೆಕ್ಕೆಜೋಳ ಬೆಳೆಸುವ ಯೋಜನೆಯೊಂದನ್ನು ರೂಪಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಅವಿನಾಶ್ ಭಟ್ ಅವರಿಂದ ಹಸುಗಳ ಸಹಿತ ಜಾನುವಾರುಗಳು ಹಾಗೂ ಅವುಗಳಿಗೆ ಬೇಕಾದ ಮೇವಿನ ಕುರಿತು ಮಾಹಿತಿ ಪಡೆದ ಬಳಿಕ ಮಾತನಾಡಿದರು.

ತುಂಬೆ ನೀರಾ ಘಟಕ ವ್ಯರ್ಥವಾಗದಂತೆ ಕಾರ್ಯಾರಂಭ ಮಾಡುವ ಮೊದಲು ನೀರಾ ಇಳಿಸುವ ತಂಡವನ್ನು ಸಿದ್ಧಗೊಳಿಸಿ, ಅವರಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಶಾಸಕರು ಸೂಚಿಸಿದರು. ಇದೇ ವೇಳೆ ಅಕ್ಷರದಾಸೋಹದ ಧಾನ್ಯಗಳು ಗೋಡೌನ್ ನಲ್ಲೇ ಉಳಿದಿರುವ ಕುರಿತು ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್ ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿನ ಅನಿವಾರ್ಯತೆ ಕುರಿತು ಜಿಪಂ ಸದಸ್ಯ ತುಂಗಪ್ಪ ಬಂಗೇರ ವಿವರಿಸಿದರು.ಮಿನಿ ವಿಧಾನಸೌಧ ಸೋರುತ್ತಿರುವ ಕುರಿತೂ ಅವರು ಗಮನ ಸೆಳೆದರು. ಅಂತ್ಯಸಂಸ್ಕಾರದ ಸಹಾಯಧನವೂ ವಿಳಂಬವಾಗುವ ಕುರಿತು ಜಿಪಂ ಸದಸ್ಯೆ ಮಂಜುಳಾ ಮಾಧವ ಮಾವೆ ಗಮನ ಸೆಳೆದರು.

ತಾಪಂ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್. ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಆನಂದ ಶಂಭೂರು, ಜೋಕಿಂ ಮಿನೇಜಸ್, ಭಾರತಿ ಚೌಟ, ಯಶವಂತ ನಾಯಕ್, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್, ಮಂಜುಳಾ ಮಾಧವ ಮಾವೆ, ಕಮಲಾಕ್ಷಿ ಪೂಜಾರಿ ಮತ್ತು ರವೀಂದ್ರ ಕಂಬಳಿ ವಿವಿಧ ವಿಷಯಗಳ ಕುರಿತು ಮಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts