ಕಲ್ಲಡ್ಕ

ಕಲ್ಲಡ್ಕ ಜಂಕ್ಷನ್ ನಲ್ಲಿ ಅಪಘಾತ ತಪ್ಪಿಸಲು ವೃತ್ತ ನಿರ್ಮಾಣ, ಡಾ. ಭಟ್ ಮನವಿಗೆ ಸ್ಪಂದಿಸಿದ ಡಿಸಿ

ಜಾಹೀರಾತು

ಕಲ್ಲಡ್ಕ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಿಂದ ವಿಟ್ಲ ಕಡೆಗೆ ಸಾಗುವ ರಸ್ತೆಯ ಜಾಗದಲ್ಲಿ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಜಾಗದಲ್ಲಿ ಸರ್ಕಲ್ ಒಂದನ್ನು ನಿರ್ಮಿಸುವಂತೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಗುರುವಾರ ಸಂಜೆ ದೂರವಾಣಿ ಮೂಲಕ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿದ ಡಾ. ಭಟ್, ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿ ಇಲ್ಲಿ ವಾರದೊಳಗೆ ವೃತ್ತ ನಿರ್ಮಿಸುವ ಕುರಿತು ಭರವಸೆ ನೀಡಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿರುವ ಕುರಿತು ಪ್ರಸ್ತಾಪಿಸಿದ ಡಾ. ಭಟ್, ಅಪಘಾತಗಳಿಗೂ ಇದು ಕಾರಣವಾಗುವ ಕುರಿತು ಪ್ರಸ್ತಾಪಿಸಿದ್ದರು. ಎರಡೂ ವಿಷಯಗಳಿಗೆ ಜಿಲ್ಲಾಧಿಕಾರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ವಾಹನಗಳು ಇಲ್ಲದೆ ಇದ್ದಾಗ ಕಲ್ಲಡ್ಕ ಜಂಕ್ಷನ್ ಹೀಗೆ ಕಾಣಿಸುತ್ತದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.