ಬಂಟ್ವಾಳ

ಎಳೆಯ ಪ್ರತಿಭೆ ಗುರುತಿಸುವ ಚಿಣ್ಣರ ಲೋಕ ಸಾಧನೆ ಅಭಿನಂದನೀಯ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಜಾಹೀರಾತು

ಬಂಟ್ವಾಳದಂತ ಸಣ್ಣ ಪ್ರದೇಶದಲ್ಲಿ  ಎಳೆ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಚಿಣ್ಣರಲೋಕದ ಸಂಚಾಲಕ ಮೋಹನ್ ದಾಸ್ ಕೊಟ್ಟಾರಿ ಅವರಿಂದ ನಡೆಯುತ್ತಿರುವುದು ಅಭಿನಂದನೀಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ತಾಲೂಕಿನ  ಚಿಣ್ಣರಲೋಕ ಮೋಕೆದ ಕಲಾವಿದೆರ್  ಸೇವಾ ಟ್ರಸ್ಟ್ ಆಶ್ರಯದಲ್ಲಿ  ಐಸಿರಿ ಕರಾವಳಿಯ ಸೊಬಗು ವೀಡಿಯೋ ಅಲ್ಬಂನ ಹಾಡುಗಳ ಟೀಸರ್ ಚಿತ್ರತುಣುಕು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಜಾಹೀರಾತು

ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಈ ಸಮಾರಂಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷ,ನ್ಯಾಯವಾದಿ ಜಯರಾಮ ರೈ,ಗೌರವ ಸಲಹೆಗಾರ,ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ , ರಂಗಭೂಮಿ ಕಲಾವಿದ ದಯಾನಂದರೈ ಬೆಟ್ಟಂಪಾಡಿ, ಬಾಲಚಿತ್ರನಟಿ ದೀಕ್ಷಾ ಡಿ. ರೈ,ಸಂಗೀತ ನಿರ್ದೇಶಕ ಭಾಸ್ಕರ್ ರಾವ್ ಬಿ.ಸಿ.ರೋಡ್,ಉಪನ್ಯಾಸಕ ತೀರ್ಥಪ್ರಸಾದ್ ಭಾಗವಹಿಸಿದ್ದರು. ಇದೇ ವೇಳೆ  ಕಂಠದಾನ ಕಲಾವಿದ ,ನಿರ್ದೇಶಕ  ರಮೇಶ್ ಶಿವಪುರ ಮುಂಬೈ ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ ನ ಸಂಚಾಲಕ ಮೋಹನದಾಸ್ ಕೊಟ್ಟಾರಿ ಸ್ವಾಗತಿಸಿದರು. ಸೌಮ್ಯ ವಂದಿಸಿದರು. ಹಿರಿಯ ಕಲಾವಿದ ಎಚ್.ಕೆ.ನಯನಾಡು ಕಾರ್ಯ ಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ