ಖಾಸಗೀಕರಣದ ವಿರುದ್ಧ ಜನಜಾಗೃತರಾಗದಿದ್ದರೆ ಅಪಾಯ: ಮಾಜಿ ಗೇಣಿದಾರರ ಸಮಾವೇಶದಲ್ಲಿ ರವಿಕಿರಣ್ ಪುಣಚ

ಜಾಹೀರಾತು

ಬಂಟ್ವಾಳ: ಸರ್ಕಾರಕ್ಕೀಗ ಕಾರ್ಪೊರೇಟ್ ಶಕ್ತಿಯನ್ನು ಎದುರಿಸುವ ಶಕ್ತಿ ಇಲ್ಲ. ನಮ್ಮ ದೇಶದ ಆಸ್ತಿಯೆಲ್ಲಾ ಖಾಸಗಿಯವರ ಪಾಲಾಗುವ ದಿನ ದೂರ ಇಲ್ಲ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಆರೋಪಿಸಿದ್ದಾರೆ.

ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ ಪುಣ್ಯಸ್ಮರಣೆಯ ಪ್ರಯುಕ್ತ ಬಂಟ್ವಾಳ‌ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್  ಕಾಂಗ್ರೆಸ್ ‌ಆಶ್ರಯದಲ್ಲಿ ಮಾಜಿ ‌ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ಬಿ.ಸಿ.ರೋಡಿನ ರಂಗೋಲಿ‌ ಸಭಾಂಗಣದಲ್ಲಿ ಆಯೋಜಿಸಲಾದ ಮಾಜಿ ಗೇಣಿದಾರರ ಸಮಾವೇಶವನ್ನುದ್ದೇಶಿಸಿ‌ ಅವರು ಪ್ರಧಾನ ಭಾಷಣ ಮಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಜಿ ಗೇಣಿದಾರರು ತಾವಿಂದು ಭೂಮಿಯ ಒಡೆಯರಾಗಲು ಇಂದಿರಾಗಾಂಧಿ ಮತ್ತು ದೇವರಾಜ ಅರಸ್ ಹಾಗೂ ಕಾಂಗ್ರೆಸ್ ಪಕ್ಷ ಸವಾಲುಗಳನ್ನು ಎದುರಿಸಿ ಭೂಮಸೂದೆ ಜಾರಿಗೊಳಿಸಿದ್ದೇ ಕಾರಣ ಎಂಬುದನ್ನು ಮರೆಯಬಾರದು ಇಂದಿರಾಗಾಂಧಿ ಅವರ ಯೋಜನೆಗಳಿಂದ ಲಾಭಪಡೆದುಕೊಂಡವರೇ ಅವರ ವಿರುದ್ದ ಬೊಬ್ಬೆಹಾಕುತ್ತಿದ್ದಾರೆ. ದೇಶದ ಏಕತೆ ಹಾಗೂ ಸಾರ್ವಭೌಮತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದಿರಾಗಾಂಧಿಯವರ ಸಾಧನೆ, ಕೊಡುಗೆಗಳು ಸದಾ ಸ್ಮರಣೀಯ ಎಂದರು.

ಜಿ.ಪಂ.ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ‌ಶೆಟ್ಟಿ, ಮಂಜುಳಾ ಮಾಧವ ಮಾವೆ,  ಎಂ.ಎಸ್.ಮಹಮ್ಮದ್, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ತಾ.ಪಂ.ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ತಾ.ಪಂ‌.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ ವೇದಿಕೆಯಲ್ಲಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು. ಪಾಣೆಮಂಗಳೂರು‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಸುದೀಪ್ ಕುಮಾರ್  ಶೆಟ್ಟಿ  ವಂದಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ‌ನಿರ್ವಹಿಸಿದರು. ಸಭೆಯಲ್ಲಿ ಪಕ್ಷದ ತಾಪಂ, ಪುರಸಭೆ ಸದಸ್ಯರು, ವಿವಿಧ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಖಾಸಗೀಕರಣದ ವಿರುದ್ಧ ಜನಜಾಗೃತರಾಗದಿದ್ದರೆ ಅಪಾಯ: ಮಾಜಿ ಗೇಣಿದಾರರ ಸಮಾವೇಶದಲ್ಲಿ ರವಿಕಿರಣ್ ಪುಣಚ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*