ಬಂಟ್ವಾಳ: ಸರ್ಕಾರಕ್ಕೀಗ ಕಾರ್ಪೊರೇಟ್ ಶಕ್ತಿಯನ್ನು ಎದುರಿಸುವ ಶಕ್ತಿ ಇಲ್ಲ. ನಮ್ಮ ದೇಶದ ಆಸ್ತಿಯೆಲ್ಲಾ ಖಾಸಗಿಯವರ ಪಾಲಾಗುವ ದಿನ ದೂರ ಇಲ್ಲ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರ ಪುಣ್ಯಸ್ಮರಣೆಯ ಪ್ರಯುಕ್ತ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಆಯೋಜಿಸಲಾದ ಮಾಜಿ ಗೇಣಿದಾರರ ಸಮಾವೇಶವನ್ನುದ್ದೇಶಿಸಿ ಅವರು ಪ್ರಧಾನ ಭಾಷಣ ಮಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಜಿ ಗೇಣಿದಾರರು ತಾವಿಂದು ಭೂಮಿಯ ಒಡೆಯರಾಗಲು ಇಂದಿರಾಗಾಂಧಿ ಮತ್ತು ದೇವರಾಜ ಅರಸ್ ಹಾಗೂ ಕಾಂಗ್ರೆಸ್ ಪಕ್ಷ ಸವಾಲುಗಳನ್ನು ಎದುರಿಸಿ ಭೂಮಸೂದೆ ಜಾರಿಗೊಳಿಸಿದ್ದೇ ಕಾರಣ ಎಂಬುದನ್ನು ಮರೆಯಬಾರದು ಇಂದಿರಾಗಾಂಧಿ ಅವರ ಯೋಜನೆಗಳಿಂದ ಲಾಭಪಡೆದುಕೊಂಡವರೇ ಅವರ ವಿರುದ್ದ ಬೊಬ್ಬೆಹಾಕುತ್ತಿದ್ದಾರೆ. ದೇಶದ ಏಕತೆ ಹಾಗೂ ಸಾರ್ವಭೌಮತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದಿರಾಗಾಂಧಿಯವರ ಸಾಧನೆ, ಕೊಡುಗೆಗಳು ಸದಾ ಸ್ಮರಣೀಯ ಎಂದರು.
ಜಿ.ಪಂ.ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ತಾ.ಪಂ.ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ ವೇದಿಕೆಯಲ್ಲಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮನಿರ್ವಹಿಸಿದರು. ಸಭೆಯಲ್ಲಿ ಪಕ್ಷದ ತಾಪಂ, ಪುರಸಭೆ ಸದಸ್ಯರು, ವಿವಿಧ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…