ಹೆದ್ದಾರಿ ಗುಂಡಿಗಳಿಗೆ ಮೋಕ್ಷ, ಸೋಮವಾರದಿಂದ ಕೆಲಸ – ಪ್ರತಿಭಟನೆಗೆ ಮುಂದಾದ ಎಸ್.ಡಿ.ಪಿ.ಐ.ಗೆ ಅಧಿಕಾರಿಗಳ ಭರವಸೆ

ಬಂಟ್ವಾಳ: ತೀವ್ರ ಹದಗೆಟ್ಟಿರುವ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಭಾಗಗಳಲ್ಲಿ ಸೋಮವಾರದಿಂದಲೇ ಹೊಂಡ ಮುಚ್ಚುವ ಹಾಗೂ ದುರಸ್ತಿ ಕಾರ್ಯಗಳನ್ನು ಆರಂಭಿಸುತ್ತೇವೆ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರುಗಳು ಭರವಸೆ ನೀಡಿದನ್ವಯ, ಎಸ್.ಡಿ.ಪಿ.ಐ. ನಡೆಸಲುದ್ದೇಶಿಸಿದ ಪ್ರತಿಭಟನೆಯನ್ನು ತಾತ್ಕಾಲಿವಾಗಿ ಕೈಬಿಟ್ಟಿದೆ. ಶುಕ್ರವಾರ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪಕ್ಷದ ಮುಖಂಡರು ಬಂಟ್ವಾಳ ನಗರ ಠಾಣಾ ಪೊಲೀಸರ ಮಧ್ಯಸ್ತಿಕೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪರವಾಗಿ ಆಗಮಿಸಿದ್ದ ಇಂಜಿನಿಯರುಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ.

ಜಾಹೀರಾತು

ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ ಗುಂಡಿಗಳು ಮುಚ್ಚುವಂತೆ ಆಗ್ರಹಿಸಿ ನ.5ರಂದು ಹೆದ್ದಾರಿ ತಡೆ ಚಳವಳಿ ನಡೆಸಲು ಎಸ್.ಡಿ.ಪಿ.ಐ. ತೀರ್ಮಾನಿಸಿತ್ತು. ಸಮಸ್ಯೆ ಬಗೆ ಹರಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಸಿ ನಮ್ಮ ಜೊತೆ ಚರ್ಚೆ ನಡೆಸಲು ಅವಕಾಶ ಮಾಡಲಾಗುವುದು ಎಂದು ಪೊಲೀಸರು ಮಾಡಿದ ಮನವಿಗೆ ಸ್ಪಂದಿಸಿ ಹೆದ್ದಾರಿ ತಡೆ ಚಳವಳಿಯನ್ನು ಆ ದಿನ ಕೈ ಬಿಡಲಾಗಿತ್ತು. ಅದರಂತೆ ಇಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು ನವೆಂಬರ್ 9ರಿಂದ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

ಜಾಹೀರಾತು

ಸೋಮವಾರದಿಂದ ಕಾಮಗಾರಿ ಆರಂಭಿಸದಿದ್ದರೆ ಕಲ್ಲಡ್ಕದಿಂದ ಪಾಣೆಮಂಗಳೂರು ವರೆಗೆ ಜಾಥ ನಡೆಸಿ ಪಾಣೆಮಂಗಳೂರು ಮಾಂಡೋವಿ ಕಾರು ಶೋರೂಂ ಬಳಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಹಾಗೂ ಈ ಕುರಿತು ಇಲಾಖೆ ವಿರುದ್ಧ ಪ್ರಕರಣ ದಾಖಲಿಸುವ ಕುರಿತು ಯೋಚಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಪರವಾಗಿ ಸಹಾಯಕ ಇಂಜಿನಿಯರ್ ಅನಿರುದ್ದ್, ಸೈಟ್ ಇಂಜನಿಯರ್ ನಾಸಿರ್ ಬಂಟ್ವಾಳ ನಗರ ಠಾಣೆ ಎಸ್.ಐ. ಅವಿನಾಶ್ ಉಪಸ್ಥಿತಿಯಲ್ಲಿ ಮಾತನಾಡಿದರು. ಎಸ್.ಡಿ.ಪಿ.ಐ. ದ.ಕ. ಜಿಲ್ಲಾ‌ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಉಪಾಧ್ಯಕ್ಷ ಮುಹಮ್ಮದ್ ಇಕ್ಬಾಲ್ ಗೂಡಿನಬಳಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ, ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ, ಪುರಸಭಾ ಸದಸ್ಯ ಮುನೀಶ್ ಅಲಿ, ಪ್ರಮುಖರಾದ ಮಾಲಿಕ್ ಕೊಳಕೆ, ಸತ್ತಾರ್ ಕಲ್ಲಡ್ಕ, ಇಕ್ಬಾಲ್ ನಂದರಬೆಟ್ಟು, ಉಬೈದ್ ಬಂಟ್ವಾಳ, ರವೂಫ್ ಕಲಾಯಿ, ಫೈಝಲ್ ಮಂಚಿ ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹೆದ್ದಾರಿ ಗುಂಡಿಗಳಿಗೆ ಮೋಕ್ಷ, ಸೋಮವಾರದಿಂದ ಕೆಲಸ – ಪ್ರತಿಭಟನೆಗೆ ಮುಂದಾದ ಎಸ್.ಡಿ.ಪಿ.ಐ.ಗೆ ಅಧಿಕಾರಿಗಳ ಭರವಸೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*