ಬಂಟ್ವಾಳ: ಭಾನುವಾರ ಬೆಳಗ್ಗೆ ಸುಮಾರು 7ರಿಂದ 8 ಗಂಟೆಯೊಳಗೆ ವ್ಯಕ್ತಿಯೊಬ್ಬ ಬಿ.ಸಿ.ರೋಡಿನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಘಟನೆ ನಡೆದಿದ್ದು, ಇದೀಗ ಆತನ ಶೋದ ಕಾರ್ಯ ನಡೆಯುತ್ತಿದೆ. ಗೂಡಿನಬಳಿಯ ಮುಳುಗುತಜ್ಞರಾದ ಮಹಮ್ಮದ್ ಮತ್ತು ತಂಡ, ಬಂಟ್ವಾಳ ಅಗ್ನಿಶಾಮಕದಳ ಇಲಾಖೆಯ ಸಿಬ್ಬಂದಿ ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಬಂಟ್ವಾಳ ನಗರ ಪೊಲೀಸರು ಉಪಸ್ಥಿತರಿದ್ದರು. ಸೇತುವೆಯಲ್ಲಿ ಪುತ್ತೂರು ಸಮೀಪದ ಬಲ್ನಾಡು ಎಂಬಲ್ಲಿನ ವ್ಯಕ್ತಿಯೊಬ್ಬರ ಹೆಸರಿನ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತಿತರ ವಸ್ತುಗಳಿರುವ ಬ್ಯಾಗೊಂದು ದೊರಕಿದ್ದು, ಕೂಡಲೇ ಪೊಲೀಸರು ಆ ವಿಳಾಸವನ್ನು ಸಂಪರ್ಕಿಸಿ ಮನೆಯವರನ್ನು ಬರಹೇಳಿದ್ದಾರೆ. ಇದೀಗ ನೀರಿಗೆ ಹಾರಿದ ವ್ಯಕ್ತಿಯನ್ನು ಪತ್ತೆಹಚ್ಚಿದ ಮೇಲಷ್ಟೇ ಸ್ಪಷ್ಟ ಚಿತ್ರಣ ದೊರಕಲಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ನೇತ್ರಾವತಿ ನದಿಗೆ ಸೇತುವೆಯಿಂದ ಹಾರಿದ ವ್ಯಕ್ತಿಗೆ ಶೋಧ"