ಬಂಟ್ವಾಳ

ನವೋದಯ ಮಿತ್ರಕಲಾವೃಂದದ ಸೇವೆ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ: ರಾಜೇಶ್ ನಾಯ್ಕ್

ಜಾಹೀರಾತು

ಬಂಟ್ವಾಳ: ನಿಸ್ವಾರ್ಥ ಸೇವೆ, ಸಹಕಾರ, ರಾಷ್ಟ್ರ ಜಾಗೃತಿ ಮೂಲಕ ಯುವಶಕ್ತಿ ನಿರ್ಮಾಣ ಮುಂತಾದ ಹತ್ತುಹಲವು ಪ್ರಾಮಾಣಿಕ ಸೇವಾ ಗುಣಗಳಿಂದ ನೆತ್ರಕೆರೆ ನವೋದಯ ಮಿತ್ರಕಲಾ ವೃಂದಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ನವೋದಯ ಮಿತ್ರ ಕಲಾವೃಂದ (ರಿ.) ನೆತ್ರಕೆರೆ, ನೇತ್ರಾವತಿ ಮಾತೃ ಮಂಡಳಿ ನೆತ್ರಕೆರೆ ಸಂಘಕ್ಕೆ ಲಭಿಸಿದ 2020ನೇ ಸಾಲಿನ ದ.ಕ‌. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಮಾಜಕ್ಕೆ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭವನ್ನು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಉದ್ಘಾಟಿಸಿದರು. ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚುತ್ತದೆ. ಇನ್ನಷ್ಟು ಸಾಮಾಜಿಕ  ಚಟುವಟಿಕೆಗಳ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸುವಂತಾಗಲಿ ಎಂದು ಆಶೀರ್ವದಿಸಿದರು.

ದೇವದಾಸ್ ಮಾಸ್ತರ್ ಕೊಡ್ಮಾಣ್, ಸದಾಶಿವ ಡಿ ತುಂಬೆ, ಭಾಸ್ಕರ್ ರೈ, ದಿನೇಶ್ ಅಮೀನ್, ತೇವು ತಾರನಾಥ ಕೊಟ್ಟಾರಿ, ಪ್ರಸಾದ್ ಕುಮಾರ್ ಬಿ.ಸಿ.ರೋಡು, ಮಂಜು ವಿಟ್ಲ, ಶಾಲಾ ಮುಖ್ಯಶಿಕ್ಷಕಿ ಗುಣರತ್ನ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪುತ್ತೂರು ಜಿಲ್ಲಾ ಸಂಘಚಾಲಕರಾದ ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಉಭಯ ಸಂಘಗಳ ಅಧ್ಯಕ್ಷರುಗಳಾದ ಸುರೇಶ್ ಭಂಡಾರಿ ಅರ್ಬಿ, ವಸಂತಿ ರಾಮಚಂದ್ರ, ತಾಪಂ ಸದಸ್ಯ ಗಣೇಶ್ ಸುವರ್ಣ, ಭೂಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಅರುಣ್ ರೋಶನ್ ಡಿ’ಸೋಜ, ಪ್ರಸಾದ್ ಕುಮಾರ್, ತೇವು ತಾರನಾಥ ಕೊಟ್ಟಾರಿ, ಐತಪ್ಪ ಆಳ್ವ, ಉಮೇಶ್ ಸಾಲ್ಯಾನ್, ರಾಧಾಕೃಷ್ಣ ತಂತ್ರಿ, ಜ್ಯೋತೀಂದ್ರಶೆಟ್ಟಿ ಮುಂಡಾಜೆಗುತ್ತು, ನವೀನ್ ಚಂದ್ರ ಶೆಟ್ಟಿ, ರಮಾನಂದ ಶೆಟ್ಟಿ ಬೆಂಜನಪದವು, ಗೋಪಾಲ್ ಅಂಚನ್ ಮತ್ತಿತರರು ಉಪಸ್ಥಿತರಿದ್ದರು. ನವೋದಯ ಮಿತ್ರ ಕಲಾ ವೃಂದದ ಸಂಚಾಲಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ದಾಮೋದರ ನೆತ್ರಕೆರೆ ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಕಿ ಮೋಹಿನಿ ನಿರೂಪಿಸಿದರು. ಲೋಕೇಶ್ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.