ಬಂಟ್ವಾಳ

ಹೆದ್ದಾರಿ ಅವ್ಯವಸ್ಥೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ, ಗುಂಡಿಗಳನ್ನು ಒಮ್ಮೆ ತೇಪೆ ಹಾಕಿ ಬಳಿಕ ಮೊದಲಿನಂತಾಗುವ ವ್ಯವಸ್ಥೆಗಳು ಇಂದು ಇವೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಮಾನ ಮನಸ್ಕ ನಾಗರಿಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಬಿ.ಸಿ.ರೋಡಿನ ಫ್ಲೈಓವರ್ ಬಳಿ ಪ್ರತಿಭಟನೆ ಮಂಗಳವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಹೆದ್ದಾರಿಯ ಬಿ.ಸಿ.ರೋಡ್ ಪೇಟೆ ಹಾದುಹೋಗುವ ಭಾಗದಲ್ಲಿ ಕಾಂಕ್ರೀಟ್ ಹಾಕುವ ಮೂಲಕ ಹಾಗೂ ಪ್ರತಿ ಬಾರಿಯೂ ಹೊಂಡ ಬೀಳುವ ಕುರಿತು ವೈಜ್ಞಾನಿಕ ಕಾರಣಗಳನ್ನು ಹುಡುಕುವ ಮೂಲಕ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.

ಸಮಾನ ಮನಸ್ಕ ಸಂಘಟನೆಯ ಸಮನ್ವಯ ಸಮಿತಿ ಅಧ್ಯಕ್ಷ ಬಿ.ಎಂ.ಪ್ರಭಾಕರ ದ್ವೆವಗುಡ್ಡೆ, ಕಾರ್ಯದರ್ಶಿ ಬಿ.ಶೇಖರ್, ಸಾಮಾಜಿಕ ಮುಖಂಡ ಮೊಹಮ್ಮದ್‌ ಶಾಫಿ, ರಿಕ್ಷಾ ಡ್ರೈವರ್ ಅಸೋಸಿಯೇಷನ್ ಮುಂದಾಳು ಪುತ್ತುಮೋನು ಮಾತನಾಡಿದರು. ಪ್ರಮುಖರಾದ ನ್ಯಾಯವಾದಿ ನೋಟರಿ ಚಂದ್ರಶೇಖರ ಪೂಜಾರಿ, ಸುರೇಶ್ ಕುಮಾರ್ ಬಂಟ್ವಾಳ್, ಹಾರೂನ್ ರಶೀದ್, ಪ್ರೇಮನಾಥ ಕೆ, ಶ್ರೀನಿವಾಸ ಭಂಡಾರಿ, ಇಬ್ರಾಹಿಂ ನಾವೂರು, ಇಸ್ಮಾಲಿ ಅರಬಿ ಕೆಳಗಿನಪೇಟೆ, ಸವಾದ್ ಬಂಟ್ವಾಳ, ತಿಮ್ಮಪ್ಪ ಪೂಜಾರಿ ಸಿದ್ದ ಕಟ್ಟೆ, ನಮೇಶ್ ಶೆಟ್ಟಿ ಕುರಿಯಾಳ, ರಮೇಶ್ ಕುಲಾಲ್ ದ್ವೆಪಲ, ಇಕ್ಬಾಲ್ ಪಣಕಜೆ, ಗುಣಕರ್ ಪಣಕಜೆ, ಸುರೇಶ್ ಬಸ್ತಿಕೋಡಿ, ಅಬ್ದುಲ್ ಲತೀಫ್ ತುಂಬೆ, ಹುಸ್ವೆನಾರ್ ಪರ್ಲಿಯಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಈಶ್ವರನ ಹೂದೋಟವೆನಿಸಿದ ಪದ್ಯಾಣದಲ್ಲಿ ಬ್ರಹ್ಮಕಲಶೋತ್ಸವ, ಮಾರ್ಚ್30ರಿಂದ ಏ.6ರವರೆಗೆ ಕಾರ್ಯಕ್ರಮ

| ಮಾರ್ಚ್ 30ರಂದು ಏಕಾದಶ ನದಿಗಳ ಪುಣ್ಯ ತೀರ್ಥಗಳ ಭವ್ಯ ಮೆರವಣಿಗೆ | ಸಂತರು, ಕೇಂದ್ರ ಸಚಿವರು, ಡಿಸಿಎಂ ಸಹಿತ…

36 minutes ago