ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಮುಳ್ಳುಂಜ ವೆಂಕಟೇಶ್ವರ ಭಟ್ ಪುನರಾಯ್ಕೆಯಾಗಿದ್ದಾರೆ. ಅವರು ಕಳೆದ 18 ವರ್ಷಗಳಿಂದ ದೇವಸ್ಥಾನದ ಆಡಳಿತ ಸಮಿತಿಯ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಪ್ರಸ್ತುತ ದೇವಾಲಯವು ಶಿಲಾಮಯ ಗೋಪುರ ತೀರ್ಥ ಮಂಟಪ ಗರ್ಭಗುಡಿ ಒಂದಿಗೆ ಅಂದಾಜು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ನೂತನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಗಣಪತಿ ಭಟ್, ಪ್ರವೀಣ್ ಭಂಡಾರಿ, ವಿಟ್ಟಲ್ ದಾಸ್, ಹರೀಶ್ ಬಂಗೇರ, ಬಾಬು ಪೂಜಾರಿ, ಪುರುಷೋತ್ತಮ ನಾಯಕ್, ಗೀತಾ. ರೇವತಿ ಆಯ್ಕೆಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮುಳ್ಳುಂಜ ವೆಂಕಟೇಶ್ವರ ಭಟ್ ಪುನರಾಯ್ಕೆ"