ಬಂಟ್ವಾಳ: ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಸುಮೋಧರ ಶೆಟ್ಟಿ ಚೆಲ್ಲಡ್ಕ(ಕೆ.ಡಿ.ಶೆಟ್ಟಿ) ಅವರನ್ನು ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಚೆಲ್ಲಡ್ಕ ಮನೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.
ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪದಾಽಕಾರಿಗಳಾದ ವಿಜಯಕೃಷ್ಣ ಐತಾಳ್ ಪುಂಜೂರು, ಸರಪಾಡಿ ಅಶೋಕ ಶೆಟ್ಟಿ, ಪುರುಷೋತ್ತಮ ಪೂಜಾರಿ ಮಜಲು, ಕುಸುಮಾಕರ ಶೆಟ್ಟಿ ಕುರ್ಯಾಳ, ಉಮೇಶ್ ಆಳ್ವ ಕೊಟ್ಟುಂಜ, ರಾಧಾಕೃಷ್ಣ ರೈ ಕೊಟ್ಟುಂಜ, ಪ್ರಕಾಶ್ಚಂದ್ರ ಆಳ್ವ ಪಿ, ಶಿವರಾಮ ಶೆಟ್ಟಿ ಅಂತರ ದೋಟ, ಸಂತೋಷ್ ಶೆಟ್ಟಿ ಸರಪಾಡಿ, ಗಿರೀಶ್ ನಾಯ್ಕ್ ನೀರಪಲ್ಕೆ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಉಪಸ್ಥಿತರಿದ್ದರು.