ಯುವವಾಹಿನಿ ಮಾಣಿ ಘಟಕ ಅಧ್ಯಕ್ಷರಾಗಿ ಪ್ರಶಾಂತ್ ಅನಂತಾಡಿ

ಜಾಹೀರಾತು

ಬಂಟ್ವಾಳ: ಯುವವಾಹಿನಿ ಮಾಣಿ ಘಟಕದ 2020-21 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಅನಂತಾಡಿ, ಕಾರ್ಯದರ್ಶಿಯಾಗಿ ರಾಜೇಶ್ ಎಸ್.ಬಲ್ಯ ಹಾಗೂ ಇತರ ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷ ರಮೇಶ್ ಮುಜಲ ವಹಿಸಿದ್ದರು. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ ಆಡಳಿತ ಮಂಡಳಿ ಕೋಶಾಧಿಕಾರಿ ಪದ್ಮರಾಜ್ ಆರ್, ಮಂಗಳೂರು ನಾರಾಯಣಗುರು ಅಧ್ಯಯನ ಪೀಠದ ಸದಸ್ಯೆ ನಮಿತಾ ಶ್ಯಾಮ್ ಉಪಸ್ಥಿತರಿದ್ದರು. ನಾರಾಯಣಗುರು ಸೇವಾ ಸಂಘ ಮಾಣಿಯ ಅಧ್ಯಕ್ಷರಾದ ಸುರೇಶ್ ಸೂರ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.  ಸಾಧಕರಾದ ಈಶ್ವರ ಪೂಜಾರಿ ಕಡೇಶಿವಾಲಯ, ನಾರಾಯಣ ಸಾಲ್ಯಾನ್ ಮಂಜಲಹಿತ್ಲು,ಡಾ. ಶ್ರುತಿಕಾಂತ್, ನಿಶಾ, ಪ್ರಶಾಂತ್ ಅನಂತಾಡಿ ಅವರನ್ನು ಸನ್ಮಾನಿಸಲಾಯಿತು. ಕೊರೋನ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಸಮಾಜದ 5 ಜನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.  ಬಿಲ್ಲವ ಬಡ ಕುಟುಂಬದ 3 ಜನ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಹಸ್ತಾಂತರಿಸಲಾಯಿತು. ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಬಿಲ್ಲವ ಬಡ ಕುಟುಂಬದ ಇಬ್ಬರು ವಧುಗಳಿಗೆ ಮಂಗಳನಿಧಿಯನ್ನು ಹಸ್ತಾಂತರಿಸಲಾಯಿತು. ಯುವವಾಹಿನಿ ಮಾಣಿ ಘಟಕದ ಒಂದು ವರ್ಷದ ಕಾರ್ಯಕ್ರಮಗಳನ್ನು ಒಳಗೊಂಡ ವಾರ್ಷಿಕ ಸಂಚಿಕೆ ಮಾಣಿಕ್ಯವನ್ನು ಪ್ರಧಾನ ಸಂಪಾದಕ ರೇಣುಕಾ ಕಣಿಯೂರು ಉಪಸ್ಥಿತಿಯಲ್ಲಿ ಪದ್ಮರಾಜ್ ಆರ್ ಬಿಡುಗಡೆ ಗೊಳಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಬಾಕಿಲ ಪರಿಚಯ ಮಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ನೆರವೇರಿಸಿಕೊಟ್ಟರು. ನೂತನ ಅಧ್ಯಕ್ಷರಾಗಿರುವ ಪ್ರಶಾಂತ್ ಅನಂತಾಡಿ ಇವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘಟನಾ ಕಾರ್ಯದರ್ಶಿ ರಾಜೇಶ್ ಬಾಬನಕಟ್ಟೆ ಶುಭಹಾರೈಸಿದರು. ಕಾರ್ಯದರ್ಶಿ ಶಿವರಾಜ್ ಪಿ.ಆರ್ ಸ್ವಾಗತಿಸಿದರು, ನಿಯೋಜಿತ ಕಾರ್ಯದರ್ಶಿ ರಾಜೇಶ್ ಎಸ್ ಬಲ್ಯ ವಂದಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವವಾಹಿನಿ ಮಾಣಿ ಘಟಕ ಅಧ್ಯಕ್ಷರಾಗಿ ಪ್ರಶಾಂತ್ ಅನಂತಾಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*