ಬಂಟ್ವಾಳ

ಶುಭಸುದ್ದಿ – ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ ನಿಂದ ಮಾಣಿ ಭಾಗ ರಿಪೇರಿಯಾಗುತ್ತಿದೆ….

ಜಾಹೀರಾತು

ಸೋಶಿಯಲ್ ಮೀಡಿಯಾ ಸಹಿತ ಸಾರ್ವಜನಿಕರ ಚರ್ಚೆಗೆ ವಸ್ತುವಾಗಿದ್ದ, ಹಲವು ಪ್ರತಿಭಟನೆಗಳಿಗೆ ವೇದಿಕೆಯಾಗಿದ್ದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಿಂದ ಮಾಣಿವರೆಗಿನ ರಿಪೇರಿ ಕಾರ್ಯ ಕೊನೆಗೂ ಆರಂಭವಾಗಿದೆ. ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ 10 ದಿನಗಳೊಳಗೆ ಸರಿಯಾದ ದುರಸ್ತಿ ಕಾರ್ಯ ನಡೆಸಬೇಕು ಎಂಬ ಜಿಲ್ಲಾಧಿಕಾರಿ ಸೂಚನೆ ಹಿನ್ನೆಲೆಯಲ್ಲಿ ಗುರುವಾರ ಬೆಳಗಿನಿಂದಲೇ ದುರಸ್ತಿ ಕಾರ್ಯ ಆರಂಭಗೊಂಡಿತು. 

ಆದರೆ ಟ್ರಾಫಿಕ್ ಪೊಲೀಸರಿಗೆ ಈ ಕುರಿತು ಪೂರ್ವಸೂಚನೆ ಇಲ್ಲದ ಕಾರಣ ಸಂಜೆವರೆಗೆ ವಾಹನದಟ್ಟಣೆ ಬಿ.ಸಿ.ರೋಡಿನಿಂದ ಕಲ್ಲಡ್ಕವರೆಗೆ ತಲೆದೋರಿತು. ಪರ್ಯಾಯ ದಾರಿ ಗೊತ್ತಿದ್ದವರು, ಅದನ್ನು ಬಳಸಿದರೆ, ಉಳಿದವರು ಸಾಲಿನಲ್ಲಿ ನಿಂತು ಬಸವಳಿದರು. ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿಯಂತ್ರಣಕ್ಕೆ ಹರಸಾಹಸಪಟ್ಟರು. ಅಂಬ್ಯುಲೆನ್ಸ್ ಗಳು ಕೂಡ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಬೇಕಾಯಿತು. ಕೊನೆಗೆ ಟ್ರಾಫಿಕ್ ಪೊಲೀಸ್ ಠಾಣೆಯ ಎಸ್ ಐ ರಾಜೇಶ್ ಕೆ.ವಿ ಹಾಗೂ ಸಬ್ ಇನ್ಸ್ ಪೆಕ್ಟರ್ ಗಳಾದ ಅವಿನಾಶ್, ಪ್ರಸನ್ನ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು,ಹೋಂಗಾಡ್೯ ಸಿಬ್ಬಂದಿಗಳು ರಸ್ತೆಗಿಳಿದು ಹರಸಾಹಸಪಟ್ಟು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ಯಶಸ್ವಿಯಾದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts