ಜಿಲ್ಲಾ ಸುದ್ದಿ

ಪ್ರತ್ಯೇಕ ಮರಳು ನೀತಿ, ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ – ಸಿಎಂಗೆ ಕರಾವಳಿ ಬಿಜೆಪಿ ಶಾಸಕರ ನಿಯೋಗ ಮನವಿ

ಜಾಹೀರಾತು

ಬಂಟ್ವಾಳ:  ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕೆ ಸಮಸ್ಯೆ ಸಂಬಂಧ ‘ಪ್ರತ್ಯೇಕ ಮರಳುನೀತಿ’ ಯನ್ನು ಶೀಘ್ರ ಅನುಷ್ಠಾನಕ್ಕೆ ತರಬೇಕು ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ದ.ಕ.ಜಿಲ್ಲೆಯ ತುಂಬೆ,ಮಳವೂರು ಡ್ಯಾಂ ಸಹಿತ ಇತರೆಡೆಯಲ್ಲಿ ಶೇಖರಣೆಯಾಗಿರುವ ಮರಳು ತೆರವಿಗೆ ಜಿಲ್ಲಾಧಿಕಾರಿಯವರಿಗೆ ಪೂರ್ಣ ಅಧಿಕಾರ ನೀಡುವುದಲ್ಲದೆ ನಾನ್ -ಸಿಆರ್ ಝಡ್ ವ್ಯಾಪ್ತಿಯಲ್ಲಿ ರಾಜ್ಯ ಮಿನರಲ್ ನಿಗಮಕ್ಕೆ ಸಲ್ಲಿಸಿರುವ 30 ಪ್ರಸ್ತಾವನೆಯನ್ನು ತಕ್ಷಣ ಟೆಂಡರ್ ಕರೆದು ಅನುಮತಿ ನೀಡುವಂತೆ  ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭ ಸಚಿವ ಸಿ.ಸಿ.ಪಾಟೀಲ್, ಶಾಸಕರುಗಳಾದ  ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸಂಜೀವ ಮಠಂದೂರು,  ಎಸ್.ಅಂಗಾರ, ವೇದವ್ಯಾಸ ಕಾಮತ್,  ಹರೀಶ್ ಪೂಂಜಾ ಅವರು ಹಾಜರಿದ್ದರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ