ರಾಜ್ಯವ್ಯಾಪಿ ಸೀರತ್ ಅಭಿಯಾನ ಪ್ರಯುಕ್ತ, ಜಮಾಅತೆ ಇಸ್ಲಾಮಿ ಹಿಂದ್ ಆಯೋಜನೆಯಲ್ಲಿ ಪ್ರಬಂಧ ಸ್ಪರ್ಧೆ

ಬಂಟ್ವಾಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ ರಾಷ್ಟ್ರವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಮೂರು ವಿಭಾಗಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಈ ವಿಷಯವನ್ನು ಜಮಾಅತೆ ಇಸ್ಲಾಮಿ ಹಿಂದ್ ಬಂಟ್ವಾಳ ಸಂಚಾಲಕ ಶಾಹುಲ್ ಹಮೀದ್ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಸಂಜೆ ತಿಳಿಸಿದರು.

ಜಾಹೀರಾತು

ಪತ್ರಕರ್ತರಿಗೆ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಮಾಜ ಸುಧಾರಣೆಗೆ ಪ್ರವಾದಿ ಮುಹಮ್ಮದ್ (ಸ)ರ ಕೊಡುಗೆ, ವಕೀಲರಿಗೆ ಮತ್ತು ಕಾನೂನು ವಿದ್ಯಾರ್ಥಿಗಳಿಗೆ ಪ್ರವಾದಿ ಮುಹಮ್ಮದ್ (ಸ) ರ ಸಾಮಾಜಿಕ ನ್ಯಾಯದ ಪರಿಕಲ್ಪನೆ, ಶಿಕ್ಷಕರಿಗೆ ಹಾಗೂ ಶಿಕ್ಷಣ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರವಾದಿ ಮುಹಮ್ಮದ್ (ಸ)ರ ಕೊಡುಗೆ ವಿಷಯದಲ್ಲಿ ಪ್ರತ್ಯೇಕ ಸ್ಪರ್ಧೆಗಳು ನಡೆಯಲಿವೆ. ಪ್ರಬಂಧವು ಅಧ್ಯಯನಾತ್ಮಕ, ಸ್ವರಚಿತ, ಸ್ವತಂತ್ರವಾಗಿರಬೇಕು, ಎಲ್ಲಿಯೂ ಪ್ರಕಟವಾಗಿರಬಾರದು, ಫುಲ್ ಸ್ಕೇಪ್ ಬಿಳಿ ಹಾಳೆಯ ಒಂದೇ ಮಗ್ಗುಲಲ್ಲಿ ಎಂಟು ಪುಟಗಳಿಗೆ ಮೀರಬಾರದು, ತಮ್ಮ ಗುರುತುಚೀಟಿ ಅಥವಾ ಮೊಹರಿನೊಂದಿಗೆ ಪತ್ರಕರ್ತರು, ನ್ಯಾಯವಾದಿಗಳು ಹಾಗೂ ಪ್ರಾಂಶುಪಾಲರ ಸಹಿಯೊಂದಿಗೆ ಶಿಕ್ಷಕರು, ವಿದ್ಯಾರ್ಥಿಗಳು ಪ್ರಬಂಧವನ್ನು ಡಿಸೆಂಬರ್ 10ರೊಳಗೆ ಮುಖತಃ, ಅಂಚೆ, ಕೊರಿಯರ್ ಮೂಲಕ ತಮ್ಮ ಭಾವಚಿತ್ರದೊಂದಿಗೆ ಸೀರತ್ ಪ್ರಬಂಧ ಸ್ಪರ್ಧೆ 2020 ಎಂದು ಬರೆದು, ತಮ್ಮ ವಿಭಾಗ ನಮೂದಿಸಿ ಕಳುಹಿಸಬೇಕು. ಪ್ರಬಂಧ ಸ್ಪರ್ಧಾ ಸಮಿತಿ, ಪ್ರವಾದಿ ಮುಹಮ್ಮದ್ (ಸ) ಸೀರತ್ ಅಭಿಯಾನ 2020, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು 575001 ವಿಳಾಸಕ್ಕೆ ಕಳುಹಿಸಬಹುದು. ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ 10 ಸಾವಿರ ಮತ್ತು ತೃತೀಯ 5 ಸಾವಿರ ರೂ ಬಹುಮಾನ ಇದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿ.ಸಿ.ರೋಡ್ ಶಾಖಾಧ್ಯಕ್ಷ ಅಮಾನುಲ್ಲಾ ಖಾನ್, ಸದಸ್ಯರಾದ ಸಿ.ಅಬ್ದುಲ್ಲಾ ಪಾಣೆಮಂಗಳೂರು, ಅಬ್ದುಲ್ ಮುತಾಲಿಕ್ ಮತ್ತಿತರರು ಇದ್ದರು. ಮಾಹಿತಿಗಳಿಗೆ 9448122361, 9845665198, 08242422786 ಸಂಪರ್ಕಿಸಬಹುದು ಎಂದವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯವ್ಯಾಪಿ ಸೀರತ್ ಅಭಿಯಾನ ಪ್ರಯುಕ್ತ, ಜಮಾಅತೆ ಇಸ್ಲಾಮಿ ಹಿಂದ್ ಆಯೋಜನೆಯಲ್ಲಿ ಪ್ರಬಂಧ ಸ್ಪರ್ಧೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*