ಬಂಟ್ವಾಳ: ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2019 -20 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ವೀರಕಂಭ ಗ್ರಾಮ ಪಂಚಾಯತಿನ ರಾಜೀವ ಗಾಂಧಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ದಿಲೀಪ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಜಾಹೀರಾತು
ಪ್ರಸಕ್ತ ಸಾಲಿನಲ್ಲಿ ಸದಸ್ಯರಿಗೆ 25 ಶೇಕಡಾ ಡಿವಿಡೆಂಟ್ ಘೋಷಿಸಲಾಯಿತು ಹಾಗೂ ಸಂಘಕ್ಕೆ ಹಾಲು ಪೂರೈಸುತ್ತಿರುವ ಸದಸ್ಯರಿಗೆ ಪ್ರೋತ್ಸಾಹದಾಯಕವಾಗಿ ಉಚಿತವಾಗಿ ಫೈಬರ್ ಬಕೆಟ್ ನೀಡಲಾಯಿತು .ಕಾರ್ಯಕ್ರಮದಲ್ಲಿ ಕೆಎಂಎಫ್ ವಿಸ್ತರಣಾಧಿಕಾರಿ ದೇವರಾಜ್ ರೈತರಿಗೆ ಹಾಲಿನ ಗುಣಮಟ್ಟ ಹಾಗೂ ಪಶು ಸಾಕಣೆ ಬಗ್ಗೆ ಮಾಹಿತಿ ನೀಡಿದರು.
ವಿಸ್ತರಣಾಧಿಕಾರಿ ಜಗದೀಶ್ ರೈತರಿಗೆ ಕೆ ಎಂ ಎಫ್ ಹಾಗೂ ಸರಕಾರದಿಂದ ರೈತರಿಗೆ ಹೈನುಗಾರಿಕೆಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಂಘದ ನಿರ್ದೇಶಕ ಅಶೋಕ್ ಕುಮಾರ್ ತೆಕ್ಕಿಪಾಪು, ಸ್ವಾಗತಿಸಿದರು. ಸಂಘದ ವರದಿಯನ್ನು ಕಾರ್ಯದರ್ಶಿ ಹರೀಶ್ ಬಂಗೇರ ವಾಚಿಸಿದರು. ನಿರ್ದೇಶಕರುಗಳಾದ ಜಗನ್ನಾಥ ಆಳ್ವ ಮೈರ ,ವೆಂಕಪ್ಪ ಪೂಜಾರಿ ಮೈರ, ನಾರಾಯಣ ಮೂಲ್ಯ ಬೆತ್ತ ಸರವು, ಪದ್ಮನಾಭ ಬಂಗೇರ ಮಜಿ,, ಉಮೇಶ ಮಜಿ, ಪದ್ಮನಾಭ ಗೌಡ ಮೈರ, ಜಯಂತಿ, ಉಪಸ್ಥಿತರಿದ್ದರು ನಿರ್ದೇಶಕ ಕೇಶವ ನಾಯ್ಕ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ"
Be the first to comment on "ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ"