ಕಲ್ಲಡ್ಕ

ಕಲ್ಲಡ್ಕದ ಹಣತೆ ಪ್ರಧಾನಿಗೆ ರವಾನೆ, ದೀಪಾವಳಿ ಸಂಭ್ರಮಕ್ಕೆ ಮೆರುಗು

ಜಾಹೀರಾತು

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ  ವಿದ್ಯಾರ್ಥಿಗಳು ತಯಾರಿಸಿದ ಗೋಮಯ ಹಣತೆಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ ತಲುಪಿವೆ. ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಸುಮಾರು 10 ಸಾವಿರ ಗೋಮಯ ಹಣತೆಗಳನ್ನು ತಯಾರಿಸಿದ್ದು, ಈ ದೀಪಾವಳಿಯ ವಿಶೇಷ.

ವಿದ್ಯಾಸಂಸ್ಥೆಯಲ್ಲಿ  ಗೋಶಾಲೆ ಇದ್ದು  ಗೋವುಗಳ ಸೆಗಣಿ ಮತ್ತು ಗೋಮಯವನ್ನು ಹದಗೊಳಿಸಿ ಬಳಿಕ ನಿರ್ಧಿಷ್ಟ ಅಚ್ಚಿನಲ್ಲಿ ಒತ್ತಿ ಹಣತೆಗಳನ್ನು ತಯಾರಿಸಿ ಬಿಸಿಲಿನಲ್ಲಿ ಒಣಗಿಸಲಾಗುತ್ತದೆ.   ವಿದ್ಯಾರ್ಥಿಗಳು ಸ್ಥಳೀಯ ಮಾತೃಮಂಡಳಿಯೊಂದಿಗೆ ಸೇರಿಕೊಂಡು ಪ್ರತಿ ದಿನ ವಿವಿಧ ತಂಡಗಳಲ್ಲಿ ಸಹಸ್ರಾರು ಹಣತೆಗಳನ್ನು ತಯಾರಿಸಿದ್ದಾರೆ.ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡಿದ್ದು ವಿದ್ಯಾರ್ಥಿಗಳ ಹೆತ್ತವರು ಹಣತೆ ತಯಾರಿಕೆಯಲ್ಲಿ ಕೈ ಜೋಡಿಸಿದ್ದಾರೆ.  ಹಣತೆಗಳು ಹಗುರವಾಗಿದ್ದು ನೀರಿನ ಕೆರೆಗಳಲ್ಲಿ ಅಥವಾ ಕೊಳಗಳಲ್ಲಿಯೂ ದೀಪಗಳನ್ನು ಹಚ್ಚಿ ದೀಪಾವಳಿ ಸಂಬ್ರಮವನ್ನು ಆಚರಿಸಬಹುದಾಗಿದೆ. ಹಣತೆಗಳು ಕೆಳಗೆ ಬಿದ್ದರೂ ಹುಡಿಯಾಗುವುದಿಲ್ಲ. ಎಣ್ಣೆ ಅಥವಾ ತುಪ್ಪ ಹಾಕಿ ಉರಿಸುವುದರಿಂದ ಪರಿಸರಕ್ಕೂ ಹಾನಿ ಇಲ್ಲ.   ಒಟ್ಟು ಹಣತೆಯೇ ಉರಿದರೂ ಯಾವುದೇ ತೊಂದರೆ ಇರುವುದಿಲ್ಲ. ಈ ವರ್ಷ ಪಟಾಕಿ ಮಾರಾಟಕ್ಕೆ ನಿಷೇಧವಿರುವುದರಿಂದಲೂ ಹಣತೆಯ ಬೆಳಕಿನಲ್ಲಿಯೇ ದೀಪಾವಳಿಗೆ ವಿಶೇಷ ಮೆರಗು ನೀಡಲಿವೆ ಎಂದು ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ ಕಟ್ಟೆ ತಿಳಿಸಿದ್ದಾರೆ.  

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ