ಬಂಟ್ವಾಳ: ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಮತ್ತು ನೂತನ ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ ಅವರಿಗೆ ಗೂಡಿನಬಳಿಯಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾದ ಮೊಹಮ್ಮದ್ ನಂದಾವರ, ಪುರಸಭಾ ಸದಸ್ಯರಾದ ಲೋಲಾಕ್ಷ, ಅಬುಬಕರ್ ಸಿದ್ದಿಕ್ ಗುಡ್ಡೆಯಂಗಡಿ, ಮಸೀದಿಯ ಅಧ್ಯಕ್ಷರಾದ ಅಬ್ದುಲ್ ಮಜೀದ್, ಕಾರ್ಯದರ್ಶಿ ಮೊಹಮ್ಮದ್ ಅಸ್ಲಮ್, ಗೂಡಿನಬಳಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕರೀಂ,ಹಿರಿಯ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಖಾದರ್, ಪರ್ವೀಜ್ ಜಿ ಕೆ , ಕಾಸಿಮ್, ಯುವ ಕಾಂಗ್ರೆಸ್ ಘಟಕ ರಿಜ್ವಾನ್ ಗೂಡಿನಬಳಿ, ಅಮೀನ್,ಸಂಶೀರ್, ರಹೀಂ ಮೊದಲಾದವರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…