ಬಂಟ್ವಾಳ: ಯುವಜನ ಸಬಲೀಕರಣ ನಿಗಮ ಸ್ಥಾಪಿಸಿ, ಪ್ರತಿಯೊಂದು ಜಾತಿ, ಧರ್ಮಗಳಿಗೆ ತೆರೆಯುವ ನಿಗಮ ಪ್ರಾಧಿಕಾರಗಳಿಂದ ಯಾರಿಗೂ ಪ್ರಯೋಜನ ಇಲ್ಲ. ರಾಜ್ಯದಲ್ಲಿರುವ 1.8 ಕೋಟಿ ಯುವಜನರ ಅಭಿವೃದ್ಧಿಯ ಹಿತದೃಷ್ಟಿಯಿಂದ ಯುವಜನರ ಸಬಲೀಕರಣ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಭಾರತ ಯುವಜನ ಫೆಡರೇಶನ್ ಒತ್ತಾಯಿಸಿದೆ. ಈ ಕುರಿತು ಬಂಟ್ವಾಳ ತಾಲೂಕು ಸಮಿತಿಯಿಂದ ಅಧ್ಯಕ್ಷ ಪ್ರೇಮನಾಥ ಕೆ, ಕಾರ್ಯದರ್ಶಿ ಶ್ರೀನಿವಾಸ ಭಂಡಾರಿ, ಕೋಶಾಧಿಕಾರಿ ಸುರೇಶ್ ಕುಮಾರ್ ಬಂಟ್ವಾಳ್, ಯುವನಾಯಕ ಹರ್ಷಿತ್ ಸುವರ್ಣ, ಸಾಮಾಜಿಕ ಕಾರ್ಯಕರ್ತ ಜನಾರ್ದನ ಕೆಸರಗದ್ದೆ, ಮತ್ತು ಬಾಬು ಭಂಡಾರಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಯುವಜನ ಸಬಲೀಕರಣ ನಿಗಮ ಸ್ಥಾಪನೆಗೆ ಮನವಿ"
Be the first to comment on "ಯುವಜನ ಸಬಲೀಕರಣ ನಿಗಮ ಸ್ಥಾಪನೆಗೆ ಮನವಿ"