ಬಂಟ್ವಾಳ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಫೋಡಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾರೆ. ಬಾಳ್ತಿಲ ಗ್ರಾಮ ನಿವಾಸಿ ಯತಿರಾಜ್ ಸಾವನ್ನಪ್ಪಿದವರು. ಇವರು ಹಿಂದು ಸಂಘಟನೆಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ಭಾನುವಾರ ರಾತ್ರಿ ಸುಮಾರು 10.45ರ ವೇಳೆಗೆ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಪೋಡಿ ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಓಮ್ನಿ ಕಾರು ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಯತಿರಾಜ್ ಹಾಗೂ ಓಮ್ನಿ ಕಾರು ಚಾಲಕ ಯೋಗೀಶ್ ಗಾಯಗೊಂಡರು. ಈ ವೇಳೆ ವಾಹನಗಳು ಹಾಗೂ ರಸ್ತೆ ಬದಿಯ ವಿದ್ಯುತ್ ಕಂಬ ಜಖಂಗೊಂದ್ದವು. ಗಾಯಾಳುಗಳನ್ನು ಆಂಬುಲೈನ್ಸ್ ವಾಹನದಲ್ಲಿ ಚಿಕಿತ್ಸೆ ಬಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ 11:15 ಗಂಟೆಗೆ ಯತಿರಾಜ್ ಅವರನ್ನು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಾಯಾಳು ಓಮ್ನಿ ಕಾರು ಚಾಲಕ ಯೋಗೀಶ್ ಒಳರೋಗಿಯಾಗಿ ದಾಖಲುಗೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಕಲಂ 279, 337, 304[ಎ], 427 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…