ಕಲ್ಲಡ್ಕ

ಕಲ್ಲಡ್ಕ ಸಮೀಪ ಕುದ್ರೆಬೆಟ್ಟುವಿನಲ್ಲಿ ಭೀಕರ ರಸ್ತೆ ಅಪಘಾತ: ಯುವಕ ಸಾವು

 

ಜಾಹೀರಾತು

 

ಜಾಹೀರಾತು

 

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಫೋಡಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾರೆ. ಬಾಳ್ತಿಲ ಗ್ರಾಮ ನಿವಾಸಿ ಯತಿರಾಜ್ ಸಾವನ್ನಪ್ಪಿದವರು. ಇವರು ಹಿಂದು ಸಂಘಟನೆಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.

ಭಾನುವಾರ ರಾತ್ರಿ ಸುಮಾರು 10.45ರ ವೇಳೆಗೆ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ  ಕುದ್ರೆಬೆಟ್ಟು ಬೋಲ್ಪೋಡಿ ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಓಮ್ನಿ ಕಾರು  ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಯತಿರಾಜ್ ಹಾಗೂ ಓಮ್ನಿ ಕಾರು ಚಾಲಕ ಯೋಗೀಶ್ ಗಾಯಗೊಂಡರು. ಈ ವೇಳೆ ವಾಹನಗಳು ಹಾಗೂ ರಸ್ತೆ ಬದಿಯ ವಿದ್ಯುತ್ ಕಂಬ ಜಖಂಗೊಂದ್ದವು. ಗಾಯಾಳುಗಳನ್ನು ಆಂಬುಲೈನ್ಸ್ ವಾಹನದಲ್ಲಿ ಚಿಕಿತ್ಸೆ ಬಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ 11:15 ಗಂಟೆಗೆ ಯತಿರಾಜ್  ಅವರನ್ನು ವೈದ್ಯರು ಪರೀಕ್ಷಿಸಿ  ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಾಯಾಳು ಓಮ್ನಿ ಕಾರು ಚಾಲಕ ಯೋಗೀಶ್  ಒಳರೋಗಿಯಾಗಿ ದಾಖಲುಗೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಕಲಂ 279, 337,  304[ಎ], 427  ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ