ಬಂಟ್ವಾಳ

ಸರಪಾಡಿ ಗ್ರಾಮದ ಮುನ್ನಲಾಯಿಪದವಿನಲ್ಲಿ ಮನೆ ಸಂಪೂರ್ಣ ಬೆಂಕಿಗಾಹುತಿ

ಜಾಹೀರಾತು

ಬಂಟ್ವಾಳ: ಸರಪಾಡಿ ಗ್ರಾಮದ ಮುನ್ನಲಾಯಿಪದವು ಎಂಬಲ್ಲಿ ವಸಂತಿ‌ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಭವಿಸಿದ್ದು,ಲಕ್ಷಾಂತರ ರೂ.ನಷ್ಟ ಉಂಟಾಗಿದೆ. ವಸಂತಿ ಹಾಗೂ ಅವರ ಮನೆಮಂದಿ ಶನಿವಾರದಂದು ಸುಳ್ಯಕ್ಕೆ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದರು. ಸೋಮವಾರ ಮುಂಜಾನೆಯ ವೇಳೆಗೆ ಮನೆಯ ಒಳಗಿನಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮನೆಯತ್ತ ತೆರಳಿದಾಗ ಮನೆಯೊಳಗೆ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕದಳ ಹಾಗೂ ವಸಂತಿಯವರಿಗೆ ಕರೆ ಮಾಡಿ ಮಾಹಿತಿಯನ್ನು ನೀಡಿದರು. ಸ್ಥಳಕ್ಕಾಗಮಿಸಿದ ಆಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯರ ಸಹಕಾದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಮನೆಯಲ್ಲಿ ವಸಂತಿ ಹಾಗೂ ಅವರ ಮಗಳು,ಆಳಿಯ ಮತ್ತು ಮೊಮ್ಮಕ್ಕಳು ವಾಸಿಸುತ್ತಿದ್ದು,ಮಕ್ಕಳ ಶಾಲಾ ಪುಸ್ತಕ, ಬಟ್ಟೆ ಬರೆ, ಮನೆಯ ದಾಖಲೆಪತ್ರಗಳು,ಧವಸಧಾನ್ಯ,ಹಂಚಿನ ಮೇಲ್ಛಾವಣಿ ಸಹಿತ ಇನ್ನಿತರ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ವಸಂತಿಯವರು ಹೊಸಮನೆ ನಿರ್ಮಿಸಲು ಮರಮಟ್ಟುಗಳನ್ನು ಸಂಗ್ರಹಿಸಿಟ್ಟಿದ್ದು,ಎಲ್ಲವು ಸುಟ್ಟು ಭಸ್ಮವಾಗಿವೆ. ಸುದ್ದಿ ತಿಳಿದ ಸರಪಾಡಿ ಗ್ರಾಪಂನ ಆಡಳಿತಾಧಿಕಾರಿ ಪುಷ್ಪರಾಜ್, ಪಿಡಿಒ ಸಿಲ್ವಿಯಾ ಫೆರ್ನಾಂಡಿಸ್,ಗ್ರಾಮಕರಣಿಕ ಚೆನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಷ್ಟದ ಬಗ್ಗೆ ಅಂದಾಜಿಸಿದ್ದಾರೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.