ಬಂಟ್ವಾಳ

ನಾಗರಿಕ ಜಾಗೃತ ಸಮಿತಿ ಆಶ್ರಯದಲ್ಲಿ ನರಿಕೊಂಬುವಿನಲ್ಲಿ ಹೆಲ್ತ್ ಕಾರ್ಡ್ ವಿತರಣೆ

ಜಾಹೀರಾತು

ಬಂಟ್ವಾಳ: ಯಾವುದೇ ಫಲಾಪೇಕ್ಷೆ ಇಲ್ಲದೆ ತಾನು ಗಳಿಸಿದರಲ್ಲಿ ಸ್ವಲ್ಪ ಅಂಶವನ್ನು ಸಮಾಜದ ಏಳಿಗೆಗಾಗಿ ವಿನಿಯೋಗಿಸುವವರಿಗೆ ದೇವರ ಆಶೀರ್ವಾದ ಯಾವತ್ತೂ ಇರುತ್ತದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ನಾಗರಿಕ ಜಾಗೃತ ಸಮಿತಿ ನರಿಕೊಂಬು ಆಶ್ರಯದಲ್ಲಿ ನರಿಕೊಂಬು ಮತ್ತು ಶಂಭೂರು ಗ್ರಾಮಗಳ ಕುಟುಂಬಗಳಿಗೆ ಕ್ಷೇಮ ಹೆಲ್ತ್ ಕಾರ್ಡ್ ವಿತರಿಸಿ ಮಾತನಾಡಿದರು.

ನಾಗರಿಕ ಜಾಗೃತ ಸಮಿತಿ ನರಿಕೊಂಬು ಆಶ್ರಯದಲ್ಲಿ ವರ್ಷಂಪ್ರತಿ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಸಹಯೋಗದಲ್ಲಿ ನರಿಕೊಂಬು ಮತ್ತು ಶಂಭೂರು ಗ್ರಾಮಗಳ ಫಲಾನುಭವಿಗಳಿಗೆ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಮುತುವರ್ಜಿಯಲ್ಲಿ ಹೆಲ್ತ್ ಕಾರ್ಡ್ ವ್ಯವಸ್ಥೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ, ನಾಗರಿಕ ಜಾಗೃತ ಸಮಿತಿ ಅಧ್ಯಕ್ಷ ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಆಲ್ಫೋನ್ಸ್ ಮೆನೇಜಸ್, ಉಮೇಶ್ ಬೋಳಂತೂರು, ಮಾಧವ ಪೂಜಾರಿ ಕರ್ಬೆಟ್ಟು, ಚಂದ್ರಶೇಖರ ಪೂಜಾರಿ ಕೋರ್ಯ, ಆಲ್ಬರ್ಟ್ ಮೆನೇಜಸ್ ವೇದಿಕೆಯಲ್ಲಿದ್ದರು.

ಸಮಿತಿ ಪ್ರಮುಖರಾದ ಕೃಷ್ಣಪ್ಪ ಪೂಜಾರಿ ನಾಟಿ, ಮಾಧವ ಮಾಣಿಮಜಲು, ಸಾಯಿರಾಮ್ ನಾಯಕ್, ಸುಂದರ ಪೂಜಾರಿ ಏಲಬೆ, ಭರತ್ ರಾಜ್ ಏಲಬೆ, ದಿವಾಕರ ಅಬೆರೊಟ್ಟು, ದಿವಾಕರ ಏಲಬೆ, ಉಮೇಶ್ ನೆಲ್ಲಿಗುಡ್ಡೆ, ಬೋಗನಾಥ ಏಲಬೆ, ಗೋವಿಂದ ಪೂಜಾರಿ ಏಲಬೆ, ಸುಮತಿ ಸದಾನಂದ ಗಣೇಶ ಜನತಾಗೃಹ, ಲಿಂಗಪ್ಪ ಕೊಟ್ಟಾರಿ, ಲಕ್ಷ್ಮಣ ಪೂಜಾರಿ ಕಲ್ಯಾಣ ಅಗ್ರಹಾರ, ಗೋಪಾಲ ಅಂಚನ್ ಕರ್ಬೆಟ್ಟು, ನವೀನ್ ಮೆನೇಜಸ್, ಮೋನಪ್ಪ ನಿನ್ನಿಪಡ್ಪು, ಗೀತಾ ಶೇಡಿಗುರಿ, ಪ್ರಸಾದ್ ಕರ್ಬೆಟ್ಟು ಉಪಸ್ಥಿತರಿದ್ದರು.ಸಾಯಿರಾಮ್ ನಾಯಕ್ ಸ್ವಾಗತಿಸಿದರು. ನವೀನ್ ಮೆನೇಜಸ್ ವಂದಿಸಿದರು, ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ್ ಪ್ರಸ್ತಾವನೆಗೈದರು, ಉಮೇಶ್ ಬೋಳಂತೂರು ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts