ಸೂರಿಕುಮೇರು ಚರ್ಚ್ ನಲ್ಲಿ ಸಹೋದರತ್ವದ ಭಾನುವಾರ ಆಚರಣೆ

ಜಾಹೀರಾತು

ಜಾಹೀರಾತು

ಬಂಟ್ವಾಳ : ತಪ್ಪುಗಳು ಮನುಷ್ಯ ಜೀವನದಲ್ಲಿ  ಸಹಜ.  ಆದರೆ ತಪ್ಪುಗಳನ್ನು ಪರಸ್ಪರ ಕ್ಷಮಿಸಿ, ತಿದ್ದಿ ಬಾಳುವುದೇ ಮನುಷ್ಯ ಜೀವನ ಎಂದು  ವಂದನೀಯ ಫಾದರ್ ಅರ್ಚಿಬಾಲ್ಡ್ ಗೊನ್ಸಾಲ್ವಿಸ್ ರವರು ಹೇಳಿದರು.

ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ  ನ.22ರಂದು ನಡೆದ “ಸಹೋದರತ್ವದ ಭಾನುವಾರ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ,ಮುರಿದ ಮನಸ್ಸುಗಳು ಒಂದಾಗಿ ಸಹೋದರತ್ವದಿಂದ ಬಾಳುವುದೇ ಸಹೋದರತ್ವದ ಭಾನುವಾರದ ವಿಶೇಷತೆ ಎಂದು ವ್ಯಾಖ್ಯಾನಿಸಿದರು. ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಟ ಧರ್ಮಗುರುಗಳಾದ ಮೊನ್ಸಿಂಜೊರ್ ಮ್ಯಾಕ್ಸಿಂ ನೊರೊನ್ಹಾ ರವರು ಪ್ರಧಾನ ಧರ್ಮಗುರುಗಳಾಗಿ ಬಲಿಪೂಜೆಯನ್ನು ನಡೆಸಿದರು.

ಮಂಗಳೂರು ಕಥೊಲಿಕ್ ಸಭಾದ ನಿರ್ದೇಶಕರಾದ  ಫಾದರ್ ಮ್ಯಾಥ್ಯು ವಾಸ್ ಮಾತನಾಡಿ, ಶಿಸ್ತು, ಭಕ್ತಿ, ವಿಶ್ವಾಸ ಮತ್ತು ಪ್ರೀತಿ ಸೂರಿಕುಮೇರು ಚರ್ಚ್ ನಲ್ಲಿ ಎದ್ದು ಕಾಣುತ್ತಿದೆ. ಈ ಚರ್ಚ್ ಮಂಗಳೂರು ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್ ಗಳಿಗೆ ಮಾದರಿಯಾಗಲಿ ಎಂದರು.  ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು.ಇದೇ ಸಂದರ್ಭ ಸೂರಿಕುಮೇರು ಚರ್ಚ್ ನ ಧರ್ಮಗುರುಗಳಾದ  ವಂದನೀಯ ಫಾದರ್ ಗ್ರೆಗರಿ ಪಿರೇರಾ ರವರ ಜನ್ಮ ದಿನವನ್ನು ಚರ್ಚ್ ಪಾಲನಾ ಸಮಿತಿಯವರ ವತಿಯಿಂದ ಆಚರಿಸಲಾಯಿತು.

ಜಾಹೀರಾತು

ಬಲಿಪೂಜೆಗೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಕಾರ್ಯಕಾರಿ ಸಮಿತಿಯವರು ಕೋವಿಡ್-19 ರ ಮುನ್ನೆಚ್ಚರಿಕೆಯ  ಸ್ಕ್ರೀನಿಂಗ್ ಮತ್ತು ಸ್ಯಾನಿಟೈಜರ್ ಮಾಡಲಾಯಿತು.ಸೂರಿಕುಮೇರು ಚರ್ಚ್ ನ ಧರ್ಮಗುರುಗಳಾದ  ವಂದನೀಯ ಫಾದರ್ ಗ್ರೆಗರಿ ಪಿರೇರಾ ಸ್ವಾಗತಿಸಿದರು.ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಪಿರೇರಾ ವಂದಿಸಿದರು. ಕಾರ್ಯದರ್ಶಿ ಮೇರಿ ಡಿಸೋಜಾವರು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸೂರಿಕುಮೇರು ಚರ್ಚ್ ನಲ್ಲಿ ಸಹೋದರತ್ವದ ಭಾನುವಾರ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*