ಕಲ್ಲಡ್ಕ

ಕಲ್ಲಡ್ಕದಲ್ಲಿ ಯತಿರಾಜ್ ಶ್ರದ್ಧಾಂಜಲಿ ಸಭೆ: ಅಗಲಿದ ಕಾರ್ಯಕರ್ತಗೆ ನುಡಿನಮನ

ಜಾಹೀರಾತು

ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ  ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವಹಿಂದೂ ಪರಿಷತ್-ಬಜರಂಗದಳ ಕಲ್ಲಡ್ಕ ವಲಯ ವತಿಯಿಂದ ಬುಧವಾರ ಸಂಜೆ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಂಗಣದಲ್ಲಿ ನಡೆಯಿತು.ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಮೃದುಹೃದಯಿಯಾಗಿರುವ ನಿಷ್ಟಾವಂತ ಕಾರ್ಯಕರ್ತನನ್ನು ನಾವು ಇವತ್ತು ಕಳೆದುಕೊಂಡಿದ್ದೇವೆ ಎಂದರು, ಸಂಘಟನೆಗಳ ಪ್ರಮುಖರಾದ ಕ. ಕೃಷ್ಣಪ್ಪ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.