ಕುಕ್ಕಿಪಾಡಿ: ನಮ್ಮೂರು – ನಮ್ಮ ಕೆರೆ ಸಮಿತಿ ರಚನೆ

ಜಾಹೀರಾತು

ಬಂಟ್ವಾಳ: ಗ್ರಾಮ ಪಂಚಾಯತ್ ಕುಕ್ಕಿಪಾಡಿ ಮತ್ತು ಶ್ರೀ ಕ್ಷೇ.ಧ. ಗ್ರಾ.ಯೋ. ಬಿ ಸಿ ಟ್ರಸ್ಟ್(ರಿ); ಬಂಟ್ವಾಳ, ಸಿದ್ಧಕಟ್ಟೆ ವಲಯ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಬದ್ಯಾರು ಕೆರೆಯನ್ನು ನಮ್ಮೂರು – ನಮ್ಮ ಕೆರೆ ಕಾರ್ಯಕ್ರಮದ ಅಡಿಯಲ್ಲಿ ಹೂಳು ತೆಗೆದು ಅಭಿವೃದ್ಧಿಪಡಿಸಲು ಊರಿನ ಗಣ್ಯರನ್ನು ಸೇರಿಸಿ ಸಮಿತಿ ರಚಿಸಲಾಯಿತು.

ಜಾಹೀರಾತು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಊರಿನ ಜಲಮೂಲವಾದ ಕೆರೆಗಳ ಮಹತ್ವ ಮತ್ತು ಅಗತ್ಯ, ಅವುಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕಾದ ಅನಿವಾರ್ಯತೆಗಳ ಬಗ್ಗೆ ವಿವರಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪಿ ಜಯಾನಂದ ಧರ್ಮಸ್ಥಳದಿಂದ ಪ್ರವರ್ತಿತವಾಗುವ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜಲಮೂಲ ಸಂರಕ್ಷಣೆಯೂ ಒಂದು ಎಂದು ಹೇಳಿದರು. ಕಾರ್ಯಕ್ರಮದ ಸಮರ್ಪಕ ಅನುಷ್ಠಾನಕ್ಕಾಗಿ ಸ್ಥಳೀಯ ಗಣ್ಯರನ್ನು ಸೇರಿಸಿಕೊಂಡು ಸಮಿತಿ ರಚಿಸಲಾಯಿತು. ಸುರೇಶ್ ಶೆಟ್ಟಿ ಕುತ್ಲೋಡಿ ಅದ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಶೇಖರ್ ಮತ್ತು ಕೋಶಾಧಿಕಾರಿಯಾಗಿ ಸುಂದರ ಅವರನ್ನು ಆಯ್ಕೆ ಮಾಡಿ ಯೋಜನೆಯ ಮಾಹಿತಿ ಪತ್ರ ವಿತರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ತುಳಸಿ, ಆಡಳಿತಾಧಿಕಾರಿ ಪ್ರದೀಪ್ ಡಿಸೋಜ, ಜಿ.ಪ.ಸದಸ್ಯ ತುಂಗಪ್ಪ ಬಂಗೇರ, ತಾ.ಪ. ಸದಸ್ಯ ಪ್ರಭಾಕರ ಪ್ರಭು, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಸುಂದರ ಶಾಂತಿ, ಸತ್ಯನಾರಾಯಣ ಸೇವಾ ಸಮಿತಿ ಮುರದಮೇಲು ಅಧ್ಯಕ್ಷ  ಗೋಪಾಲಕೃಷ್ಣ ಶೆಟ್ಟಿ, ಎಂಜಿನಿಯರ್ ವಿಕೇಶ್ ಶೆಟ್ಟಿ, ಕುಕ್ಕಿಪಾಡಿ ಬಿ ಒಕ್ಕೂಟ ಅಧ್ಯಕ್ಷೆ ಸುಜಾತ ರಾಜು ಪೂಜಾರಿ, ತಾಲೂಕು ಕೃಷಿ ಅಧಿಕಾರಿ ಜನಾರ್ಧನ್, ಸೇವಾ ಪ್ರತಿನಿಧಿ ಹೇಮಲತಾ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಸ್ವಾಗತಿಸಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕುಕ್ಕಿಪಾಡಿ: ನಮ್ಮೂರು – ನಮ್ಮ ಕೆರೆ ಸಮಿತಿ ರಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*