ಬಂಟ್ವಾಳ

ಜ್ಞಾನದೀಪ – ಜ್ಞಾನ ವಿಕಾಸ ಕೇಂದ್ರದ ಪ್ರಥಮ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ.ಕ್ಷೇತ್ರ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ ಸಿ ಟ್ರಸ್ಟ್(ರಿ) ಬಂಟ್ವಾಳ ವತಿಯಿಂದ ಕಾಂಜಿರ ಕೋಡಿ ಎಂಬಲ್ಲಿ ಜ್ಞಾನ ದೀಪ – ಜ್ಞಾನ ವಿಕಾಸ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾಂಜಿರಕೋಡಿ ಸತೀಶ್ ಪೂಜಾರಿ ದೀಪ ಬೆಳಗಿಸಿ ಶುಭ ಹಾರೈಸುವ ಮೂಲಕ ಉದ್ಘಾಟಿಸಿದರು. ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಿಭಾಗದ ಗೆಳತಿ ಆಪ್ತ ಸಮಾಲೋಚಕಿ ಚೈತನ್ಯ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯೋಜನೆಯ ಬಂಟ್ವಾಳ ವಲಯಾಧ್ಯಕ್ಷ ವಸಂತ ಮೂಲ್ಯ, ಪ್ರಗತಿಪರ ಕೃಷಿಕ ಗೋಪಾಲ ನಾಯಕ್, ಕಾಂಜಿರ ಕೋಡಿ ಮನೆ ಯಜಮಾನಿ ವಾರಿಜಾ ತಿಮ್ಮಪ್ಪ, ಬಂಟ್ವಾಳ ವಲಯ ಮೇಲ್ವಿಚಾರಕಿ ಅಮಿತ ಉಪಸ್ಥಿತರಿದ್ದರು. ಜ್ಞಾನವಿಕಾಸ ಕೇಂದ್ರದ ಸದಸ್ಯೆಯರಾದ ಸುಷ್ಮಾ ನಿರೂಪಣೆಯಲ್ಲಿ ಲೀಲಾವತಿ ಸ್ವಾಗತಿಸಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಸಪ್ನಾ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ