ಪುತ್ತೂರಿನ ವಿಷನ್ ಸೇವಾ ಟ್ರಸ್ಟ್ ನಿಂದ ಒಳಿತು ಮಾಡು ಮನುಷ್ಯ ಕಾರ್ಯಕ್ರಮ

ಪುತ್ತೂರು: ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವವರಿಗೆ ಮತ್ತು ದಾನಿಗಳ ಸಹಕಾರದಿಂದ ಪ್ರತಿ ತಿಂಗಳು ದಿನಸಿ ಸಾಮಗ್ರಿಗಳ ಕಿಟ್ ನೀಡುವ ಮಾಸಿಕ ಯೋಜನೆ ಒಳಿತು ಮಾಡು ಮನುಷ್ಯದ ನವೆಂಬರ್ ತಿಂಗಳ ಕಾರ್ಯಕ್ರಮ ನವೆಂಬರ್ 29ರಂದು ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನ ರೂಫ್ ಟಾಪ್ ಹಾಲ್ ನಲ್ಲಿ ನಡೆಯಿತು.

ವಿಷನ್ ಸಹಾಯ ನಿಧಿ ಸೇವಾ ಟ್ರಸ್ಟ್ ನ ಯೋಜನೆಯಾದ ಈ ಕಾರ್ಯಕ್ರಮದಲ್ಲಿ 48 ಬಡ ರೋಗಿಗಳಿಗೆ 1,000 ರೂಪಾಯಿ ಫುಡ್ ಕಿಟ್ ನೀಡಲಾಯಿತು. ಮರದಿಂದ ಬಿದ್ದು ಬೆನ್ನು ಮೂಳೆ ಮುರಿತ ಕೊಳಕ್ಕಾದ ಪುತ್ತೂರು ತಾಲೂಕು ನಗರ ಸಭಾ ವ್ಯಾಪ್ತಿಯ ಕರ್ಕುಂಜ ನಿವಾಸಿ ಹರಿಶ್ಚಂದ್ರ ಅವರಿಗೆ ರೂ 5,000ದ ಚೆಕ್ ಮತ್ತು ಫುಡ್ ಕಿಟ್, ,ಮರದಿಂದ ಬಿದ್ದು ಬೆನ್ನು ಮೂಳೆ ಮುರಿತ ಗೊಂಡು ಮಲಗಿದ್ದಲ್ಲೆ ಇರುವ ತೆಕ್ಕಡ್ಕ ಮನೆ ಕೊಡಿಂಬಾಳ ಕಡಬ ದ ಆನಂದ ಅವರಿಗೆ ರೂ.5,000ದ ಚೆಕ್ ಮತ್ತು ಫುಡ್ ಕಿಟ್ ವಿತರಣೆ, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮುರದಾಚಡವು ಮನೆ ಕೋಡಿಂ ಬಾಳ ಕಡಬ ದ ವೇದಾವತಿಯವರಿಗೆ ರೂ 5,000ದ ಚೆಕ್ ಮತ್ತು ಫುಡ್ ಕಿಟ್ ವಿತರಣೆ ಹಾಗೂ ತುರ್ತು ಯೋಜನೆಯಾಗಿ ಕಿಡ್ನಿ ವೈಫಲ್ಯ ಧಿಂದ ಬಳಲುತ್ತಿರುವ ಅರ್ಲ ನೆಲ್ಯಾಡಿ ಯ ಸುರೇಶ್ ರವರಿಗೆ 1,500 ನಗದು ಮತ್ತು ಫುಡ್ ಕಿಟ್ ನ್ನೂ ವಿತರಿಸಲಾಯಿತು.

ಟ್ರಸ್ಟ್ ನ ದಾನಿ ಯದ ರಾಮಚಂದ್ರ ಭಟ್ ಮಡ್ಯಂಗಳ, ಗೌರವ ಸಲಹೆಗಾರರಾದ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್, ಕಲಾವಿದ ಕೃಷ್ಟಪ್ಪ  ಶಿವನಗರ, ಮಹಮ್ಮದ್ ಬಶೀರ್, ಗೌರವಾದ್ಯಕ್ಷ ಶರತ್ ಕುಮಾರ್, ಸಂಚಾಲಕರಾದ ದಿಲೀಪ್ ಕುಮಾರ್, ಅಧ್ಯಕ್ಷರಾದ ಚೇತನ್ ಕುಮಾರ್ ಪುತ್ತೂರು, ಕಾರ್ಯದರ್ಶಿ ಮೋಹನ ಸಿಂಹವನ, ಖಜಾಂಚಿ ಶೋಭಾ, ಉಪಾಧ್ಯಕ್ಷರಾದ ಸ್ವಾತಿ,  ಜ್ಯೋತಿ, ಕಾರ್ಯದರ್ಶಿ ಸರಸ್ವತಿ, ಜೊತೆ ಕಾರ್ಯದರ್ಶಿ ಸೀತಾ, ಸಂಘಟನೆ ಕಾರ್ಯದರ್ಶಿ ಗೀತಾಂಜಲಿ ಮತ್ತು ಸದಸ್ಯರಾದ  ಮುನ್ನ ಹಾಜರಿದ್ದರು. ರೋಟರಿ ಕ್ಲಬ್ ಪುತ್ತೂರು ಉಚಿತವಾಗಿ ಸಭಾಂಗಣವನ್ನು ಕಾರ್ಯಕ್ರಮಕ್ಕೆ ನೀಡಿದ್ದರು.ಕಾರ್ಯಕ್ರಮವನ್ನು ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುತ್ತೂರಿನ ವಿಷನ್ ಸೇವಾ ಟ್ರಸ್ಟ್ ನಿಂದ ಒಳಿತು ಮಾಡು ಮನುಷ್ಯ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*