ಕಲ್ಲಡ್ಕ

ಮನೆಯವರು ಮಲಗಿದ್ದಾಗ ಚಿನ್ನಾಭರಣ ಕಳವು: ವಿಟ್ಲ ಠಾಣೆಯಲ್ಲಿ ಪ್ರಕರಣ

ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ನೇರಳಕಟ್ಟೆ ಪರ್ಲೊಟ್ಟು ಎಂಬಲ್ಲಿ ಮನೆಯೊಂದರಲ್ಲಿ ಚಿನ್ನ, ನಗದು ಕಳವಾಗಿದ್ದಾಗಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ನಿವಾಸಿ ಸಲ್ಮಾನ್‌ ಎಂಬವರು ಈ ಕುರಿತು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ತನ್ನ ತಂದೆ-ತಾಯಿಯೊಂದಿಗೆ ಗಡಿಯಾರದಲ್ಲಿನ ಸಂಬಂದಿಕರ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿ ವಾಪಾಸ್ಸು ಮನೆಗೆ ಬಂದು ರಾತ್ರಿ 10 ಗಂಟೆಗೆ ಮನೆಯ ಸದಸ್ಯರೆಲ್ಲರೂ ಮಲಗಿದ್ದು, ಮಂಗಳವಾರ ಮುಂಜಾನೆತಾಯಿಯವರು ಎದ್ದು ನೋಡಲಾಗಿ ಕಪಾರ್ಟ್‌ನಲ್ಲಿದ್ದ ಬಂಗಾರ ಇಡುವ ಖಾಲಿ ಬಾಕ್ಸ್‌ ಬಿದ್ದಿರುವುದನ್ನು ಕಂಡು ಬಂದಿರುತ್ತದೆ. ಮನೆಯ ಸದಸ್ಯರೆಲ್ಲರೂ ಪರಿಶೀಲಿಸಲಾಗಿ ಸುಮಾರು 200 ಗ್ರಾಂ ಚಿನ್ನದ ಆಭರಣಗಳು, 40,000 ನಗದು ಹಾಗೂ ಒಂದು ಮೊಬೈಲ್ ಫೋನ್ ಕಳ್ಳತನವಾಗಿರುವುದು ಕಂಡು ಬಂದಿದ್ದು, ಕಳ್ಳತನವಾದ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ರೂಪಾಯಿ 6,50,000 ಆಗಬಹುದು ಎಂದು ಅಂದಾಜಿಸಲಾಗಿದೆ.. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಘಟನಾ ಸ್ಥಳಕ್ಕೆ ವಿಟ್ಲ ಎಸೈ ಎಸ್.ಐ ವಿನೋದ್ ರೆಡ್ಡಿ ಮತ್ತು ತಂಡ ಆಗಮಿಸಿ ಪರಿಶೀಲನೆ ನಡೆಸಿದರು.ಶ್ವಾನದಳ ಹಾಗೂ ಬೆರಳಚ್ಚು ತಜ್ಞ ರನ್ನೂ ಕರೆಸಿ ಪರಿಶೀಲನೆ ನಡೆಸಲಾಗಿದೆ.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago