ಬಂಟ್ವಾಳ: ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕುರಿತು ಕೆಲ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಭಕ್ತಾಭಿಮಾನಿಗಳ ಅವಗಾಹನೆಗಾಗಿ ಪ್ರಕಟಣೆಯೊಂದನ್ನು ಹೊರಡಿಸಿದೆ.
ಶ್ರೀ ಪೊಳಲಿ ದೇವಸ್ಥಾನದ ದೇವರ ಗರ್ಭಗುಡಿಯಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ಸರಿಪಡಿಸುವ ಬಗ್ಗೆ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿರುವ ಪ್ರಕಾರ ನಡೆಯಬೇಕಾದ ಕಾರ್ಯಗಳ ಬಗ್ಗೆ ಆಡಳಿತ ಮಂಡಳಿಯವರು ಸ್ಪಷ್ಟ ಮಾಹಿತಿ ಯನ್ನು ಆದಷ್ಟು ಶೀಘ್ರದಲ್ಲಿ ನೀಡಲಿರುವರು ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ಯಾವುದೇ ವದಂತಿಗಳಿಗೆ ಕಿವಿಕೊಡಬಾರದಾಗಿ ಅವರು ವಿನಂತಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…