ಪುಂಜಾಲಕಟ್ಟೆ

ಬಾಚಕೆರೆ ಭ್ರಮರಾಂಬಿಕ ಸೇವಾ ಸಂಘ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ

ಮಣಿನಾಲ್ಕೂರು ಗ್ರಾಮದ ಬಾಚಕೆರೆ   ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ   ಶ್ರೀ ಭ್ರಮರಾಂಬಿಕ ಸೇವಾ ಸಂಘ   ಇದರ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ  ಶ್ರೀ ಕ್ಷೇತ್ರ ಕಟೀಲಿಗೆ ದ್ವಿತೀಯ ವರ್ಷದ ಪಾದಯಾತ್ರೆ ಅಮ್ಮನೆಡೆಗೆ ನಮ್ಮ ನಡಿಗೆ ಕಾರ್ಯಕ್ರಮಕ್ಕೆ  ಗುರುವಾರ  ಶ್ರೀ ಕ್ಷೇತ್ರ ಬಾಚಕೆರೆಯಲ್ಲಿ ಚಾಲನೆ ನೀಡಲಾಯಿತು.  
 ಕ್ಷೇತ್ರದ ಧರ್ಮದರ್ಶಿ ದೇಚಪ್ಪ ಬಾಚಕೆರೆ ಅವರು ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಶ್ರೀ ಭ್ರಮರಾಂಬಿಕಾ ಸೇವಾ ಸಂಘದ ಮೂಲಕ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಟೀಲಿಗೆ ನಡೆಸುವ ಪಾದಯಾತ್ರೆ ಸೇವೆಯಿಂದ ಸರ್ವರಿಗೂ ಮಂಗಳವಾಗಲಿ ಎಂದು  ಶುಭ ಹಾರೈಸಿದರು.  
 ದೇವಸ್ಥಾನದ ಪ್ರ. ಅರ್ಚಕ ಪ್ರಸಾದ್ ಐತಾಳ್ ಸರಪಾಡಿ ಅರಮನೆ, ಪ್ರಮುಖರಾದ ಶಂಕರ ನಾರಾಯಣ ಹೊಳ್ಳ ಸರಪಾಡಿ, ಸಾಯಿ ಶಾಂತಿ ಕೋಕಲ, ಪ್ರಸಾದ್ ಶಾಂತಿ ಬಲಯೂರು, ಸರಪಾಡಿ ಅಶೋಕ ಶೆಟ್ಟಿ, ಪುರುಷೋತ್ತಮ ಪೂಜಾರಿ ಮಜಲು, ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್ ಗುತ್ತು, ಸಂತೋಷ್ ಶೆಟ್ಟಿ ಸರಪಾಡಿ, ಶ್ರೀ ಭ್ರಮರಾಂಬಿಕಾ ಸೇವಾ ಸಂಘದ ಅಧ್ಯಕ್ಷ ಪ್ರದೀಪ್ ರೈ ಮಾವಿನಕಟ್ಟೆ,  ಪದಾಧಿಕಾರಿಗಳಾದ ಪುರುಷೋತ್ತಮ ಕಾಯರ್ ಪಲ್ಕೆ, ಶಿವರಾಮ ಶೆಟ್ಟಿ ದೋಟ, ಮೋನಪ್ಪ ಪೂಜಾರಿ ಮತ್ತಿತರರು ಭಾಗವಹಿಸಿದ್ದರು. ಪಾದಯಾತ್ರೆಯಲ್ಲಿ ೯೦ ಮಂದಿ ಭಕ್ತರು ಪಾಲ್ಗೊಂಡಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ