ಜಿಲ್ಲಾ ಸುದ್ದಿ

ಗ್ರಾಪಂ ಚುನಾವಣೆ ಹಿನ್ನೆಲೆ: ಶಸ್ತ್ರಾಸ್ತಗಳ ಠೇವಣಿ ಕುರಿತು ಪರಿಷ್ಕೃತ ಆದೇಶ ಪ್ರಕಟ

ಡಾ. ಕೆ.ವಿ.ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತಿ  ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೊಳಪಟ್ಟ  ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವ  ಎಲ್ಲಾ ಪರವಾನಿಗೆದಾರರು  ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬಂಟ್ವಾಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರವಾನಿಗೆದಾರರು ಡಿಸೆಂಬರ್ 10 ರೊಳಗೆ ಎಲ್ಲಾ ಶಸ್ತ್ರಾಸ್ತ್ರ ಠೇವಣಿಯನ್ನು ಇಡಬೇಕು.
ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬೆಳ್ತಂಗಡಿ, ಸುಳ್ಯ ಪುತ್ತೂರು ಮತ್ತು ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಪರವಾನಿಗೆದಾರರು ಡಿಸೆಂಬರ್ 10 ರೊಳಗೆ ಎಲ್ಲಾ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಬೇಕು.
ಡಿಸೆಂಬರ್ 31 ರಂದು ಠೇವಣಿ ಇಡಲಾದ ಶಸ್ತ್ರಾಸ್ತ್ರಗಳನ್ನುಪೊಲೀಸ್ ಠಾಣೆ / ಅಧೀಕೃತ ಕೋವಿ ಮತ್ತು ಮದ್ದುಗುಂಡು ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು. ಹಿಂದಿನ ಆದೇಶದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪರವಾನಿಗೆದಾರರಿಗೆ  ಬೆಳೆರಕ್ಷಣೆಗಾಗಿ ಶಸ್ತ್ರಾಸ್ತ್ರದ ತೀರಾ ಅವಶ್ಯಕತೆ ಇದ್ದರೆ ಮಾತ್ರ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ. ಇದಕ್ಕೆ ಬದಲಾಗಿ ಪರವಾನಿಗೆದಾರರು ಪ್ರತಿ ತಾಲೂಕುಗಳಲ್ಲಿ (ತಹಶೀಲ್ದಾರರ ಕಚೇರಿ) ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗಳಿಗೆ  ಅಹವಾಲುಗಳನ್ನು ಸಲ್ಲಿಸಬಹುದು. ಈ ಸ್ಕ್ರೀನಿಂಗ್ ಸಮಿತಿಗಳಿಗೆ  ಅರ್ಹ ಪ್ರಕರಣಗಳಲ್ಲಿ ಶಸ್ತ್ರಾಸ್ತ್ರಗಳನ್ನು ಹಾಗೂ ಆತ್ಮ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದ್ದರೆ ಸಂಬಂಧಪಟ್ಟವರು ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ