ಬಂಟ್ವಾಳ: ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ಸುಮಾರು 34 ವರ್ಷಗಳಿಂದ ಜವಾನರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಕೃಷ್ಣಪ್ಪ ನಾಯ್ಕ್ ಅವರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಮಾಣಿ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಕೃಷ್ಣಪ್ಪ ನಾಯ್ಕರ ಸೇವೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ತುಂಬೆ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಂಗಾಧರ ಆಳ್ವ ಶುಭ ಹಾರೈಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್ ಮಾಣಿ, ಶಾಲಾ ಸಂಚಾಲಕ ಇಬ್ರಾಹಿಂ ಕೆ. ಮಾಣಿ, ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಶ್ರೀದೇವಿ, ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಸಾರಿಕಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹಮೀದ್ ಕಂದಕ್, ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಗಂಗಾಧರ ರೈ, ಪ್ರಶಾಂತ್ ಕುಮಾರ್ ಕೈರಂಗಳ, ಪ್ರೌಢಶಾಲಾ, ಪದವಿಪೂರ್ವ, ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ವೃಂದ, ಇತರ ವಿಭಾಗಗಳ ಸಿಬ್ಬಂದಿ ಹಾಜರಿದ್ದರು. ಮುಖ್ಯೋಪಾಧ್ಯಾಯ ಬಿ.ಕೆ.ಭಂಡಾರಿ ಸ್ವಾಗತಿಸಿದರು. ಶಿಕ್ಷಕ ಚೆನ್ನಪ್ಪ ಗೌಡ ವಂದಿಸಿದರು. ಜಯರಾಮ ಕೆ. ಕಾರ್ಯಕ್ರಮ ನಿರೂಪಿಸಿದರು.
ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ"