ಬಂಟ್ವಾಳ

ಪೊಳಲಿ ಶ್ರೀ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ವತಿಯಿಂದ 72 ಗಂಟೆಗಳ ಕಾಲ ಅಹೋರಾತ್ರಿ ಏಕಾಹ ಭಜನೆ

1 / 6

ಬಂಟ್ವಾಳ: ಪೊಳಲಿ ಶ್ರೀ ಓಂಕಾರ ಅಖಿಲೇಶ್ವರ ಭಜನಾ ಮಂಡಳಿಯ ವತಿಯಿಂದ ಪಂಚಮವರ್ಷದ 72 ಗಂಟೆಗಳ ಆಹೋರಾತ್ರಿ ಏಕಾಹ ಭಜನಾ ಮಹೋತ್ಸವವು ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಡಿ.12-15 ರ ಸೂರ್ಯೋದಯದ ವರೆಗೆ ನಡೆಯಲಿದೆ ಎಂದು ಭಜನಾ ಮಂಡಳಿಯ ಯಶೋಧರ ಅಡ್ಡೂರು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಿ.12 ರಂದು ಸೂರ್ಯೋದಯ ಸಮಯದಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ದೀಪಪ್ರಜ್ವಲನೆಗೈದು ಭಜನಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.15 ರಂದು ಸೂರ್ಯೋದಯಕ್ಕೆ ಭಜನಾ ಮಂಗಲೋತ್ಸವ ನಡೆಯಲಿದೆ. ವಿವಿಧೆಡೆಯ ಸುಮಾರು 38 ಭಜನಾ ತಂಡಗಳು ಈ ಭಜನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿವೆ ಎಂದ ಅವರು ಡಿ.10ರಂದು ಸಂಜೆ ಪೊಳಲಿ ದೇವಸ್ಥಾನದಿಂದ ಶ್ರೀ ಅಖಿಲೇಶ್ವರ ದೇವಸ್ಥಾನದ ವರೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಈ ಭಜನಾ ಮಹೋತ್ಸವದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಣಿಲ ಶ್ರೀ ಮೋಹನದಾಸ ಸ್ವಮೀಜಿ, ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಅವರು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಹಯೋಗದಲ್ಲಿ ಭಜನಾ ಸಮಾವೇಶ ಸಂಪನ್ನಗೊಳ್ಳಲಿದೆ. ಭಜನಾಮಹೋತ್ಸವದ ಕೊನೆಗೆ ಆನಂದ ಭಜನೆಯು ನಡೆಯುವುದು. ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಭಜನಾಮಹೋತ್ಸವ ನಡೆಸಲಾಗುತ್ತಿದೆ ಎಂದರು.ಭಜನಾ ಮಂಡಳಿಯ ಪದಾಧಿಕಾರಿಗಳಾದ ಹರೀಶ್ ಎಸ್.ಮಣಿಕಂಠಪುರ, ಸುಮನ್ ರಾಜ್ ಪೊಳಲಿ, ಮುರಳಿ ಪೊಳಲಿ ಉಪಸ್ಥಿತರಿದ್ದರು. 

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.