ಬಂಟ್ವಾಳ

ಭಾರತ ಬಂದ್ ಗೆ ಬಂಟ್ವಾಳದಲ್ಲಿ ನೀರಸ ಪ್ರತಿಕ್ರಿಯೆ

ಬಂಟ್ವಾಳ: ರೈತ ಸಂಘಟನೆಗಳು ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಮಂಗಳವಾರ ಕರೆ ನೀಡಿದ್ದ ಭಾರತ ಬಂದ್ ಗೆ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಬದಲಾಗಿ ಎಂದಿನಂತೆಯೇ ಬಸ್ಸು, ಕಾರುಗಳು, ದ್ವಿಚಕ್ರ ವಾಹನಗಳು ಓಡಾಟ ನಡೆಸಿದರೆ, ಜನಜೀವನ ಸಹಜ ಸ್ಥಿತಿಯಲ್ಲಿತ್ತು. ಅಂಗಡಿಗಳು ತೆರೆದಿದ್ದರೆ, ಕಚೇರಿ, ಬ್ಯಾಂಕ್, ಸರ್ಕಾರಿ ಕಚೇರಿಗಳು, ಕೋರ್ಟು, ವಕೀಲರ ಕಚೇರಿ, ದಿನಸಿ ಅಂಗಡಿಗಳು ಎಂದಿನಂತೆಯೇ ಚಟುವಟಿಕೆ ನಡೆಸಿದವು. ಕೆ.ಎಸ್.ಆರ್.ಟಿ.ಸಿ. ಬಸ್ ಗಳು, ಖಾಸಗಿ ಬಸ್ ಗಳು ಎಂದಿನಂತೆಯೇ ಸಂಚಾರ ನಡೆಸಿದವು. ರೈತಪರ ಸಂಘಟನೆಗಳಿಗೆ ಬಿಜೆಪಿಯೇತರ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದು, ಮಂಗಳೂರಿನಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದ ಕಾರಣ ಬಿ.ಸಿ.ರೋಡಿನಲ್ಲಿ ಸಾಂಕೇತಿಕ ಪ್ರತಿಭಟನೆಯೂ ಇರಲಿಲ್ಲ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ