ಬಂಟ್ವಾಳ

ಕುಂಬಾರರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ: ಬಂಟ್ವಾಳದಲ್ಲಿ ಮನವಿ ಸಲ್ಲಿಕೆ

ಬಂಟ್ವಾಳ: ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಲಾಲ ಯಾನೆ ಕುಂಬಾರ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕರಾವಳಿ ಕುಲಾಲ, ಕುಂಬಾರ ವೇದಿಕೆಗಳ  ಒಕ್ಕೂಟ ಮಂಗಳೂರು ಇದರ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಹಾಗೂ ಕುಲಾಲ ಹಿರಿಯ ನಾಗರಿಕರ  ಕ್ಷೇಮಾಭಿವೃದ್ಧಿ ಸಂಘ ಬಂಟ್ವಾಳ ಇದರ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕುಲಾಲ, ಕುಂಬಾರರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಹಲವು ಬಾರಿ ಒತ್ತಾಯಿಸಲಾಗಿತ್ತಾದರೂ ಈವರೆಗೆ ನಿಗಮ ಸ್ಥಾಪನೆಯಾಗಿಲ್ಲ. ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರರಿಗೆ ನಿಗಮವನ್ನು ಸ್ಥಾಪಿಸಿ ಗರಿಷ್ಠ ಅನುದಾನ ನೀಡಿ ಕುಲಾಲ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ  ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭ ಕುಲಾಲ ಹಿರಿಯ ನಾಗರೀಕರ ಶ್ರೇಯೋಭಿವೃದ್ದಿ ಸಂಘದ ಅಧ್ಯಕ್ಷ ಸುಂದರ್ ಬಿ., ಕಾರ್ಯದರ್ಶಿ ಟಿ. ಸೇಸಪ್ಪ ಮೂಲ್ಯ, ಕರಾವಳಿ ಕುಲಾಲ ಕುಂಬಾರ ಯುವ ವೇದಿಕೆಯ ಅಧ್ಯಕ್ಷ ಸತೀಶ್ ಕುಲಾಲ್ ಜಕ್ರಿಬೆಟ್ಟು, ಕಾರ್ಯದರ್ಶಿ ಪುನೀತ್ ಪ್ರಮುಖರಾದ ಸೋಮಪ್ಪ ಮೂಲ್ಯ, ಶೀನ ಮೂಲ್ಯ, ಓಬಯ ಮೂಲ್ಯ, ಕೃಷ್ಣಪ್ಪ ಬಂಟ್ವಾಳ, ಕೃಷ್ಣ ಶ್ಯಾಂ, ವಿಠಲ ಜಕ್ರಿಬೆಟ್ಟು, ಸೋಮಯ್ಯ ಅನಿಲನಡೆ, ಸುಕುಮಾರ್ ಬಂಟ್ವಾಳ್, ಲಕ್ಷ್ಮಣ್ ಕುಲಾಲ್ ಅಗ್ರಬೈಲು, ಗಣೇಶ್ ಕುಲಾಲ್ ಕಾಮಾಜೆ, ಎಚ್ಕೆ ನಯನಾಡು, ನಾರಾಯಣ ಸಿ. ಪೆರ್ನೆ, ಸೋಮನಾಥ ಸಾಲ್ಯಾನ್, ಕಾರ್ತಿಕ್ ಮಯ್ಯರ ಬೈಲು, ಉಮೇಶ್ ಮೂಲ್ಯ, ಅಶೋಕ್ ಕಿಲ್ತೋಡಿ, ವಿತೇಶ್, ಎನ್ನಾರ್ಕೆ ವಿಶ್ವನಾಥ, ಜಯಪ್ರಕಾಶ್  ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ