ಬಂಟ್ವಾಳ

ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ನಿಂದ ಸಂವಿಧಾನ ದಿನಾಚರಣೆ

ಬಂಟ್ವಾಳ: ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ವತಿಯಿಂದ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆಯಿತು.

ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಹಿರಿಯ ವಕೀಲ ನಂದಕಿಶೋರ್, ಸಂವಿಧಾನ ತಿದ್ದುಪಡಿಗಳು ಹಾಗೂ ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯುವ ಕಾನೂನುಗಳ ಕುರಿತು ವಿಷಯ ಮಂಡಿಸಿದರು. ಈ ಸಂದರ್ಭ ಮಾತನಾಡಿದ ಪರಿಷತ್ತಿನ ದ.ಕ.ಜಿಲ್ಲಾ ಜತೆಕಾರ್ಯದರ್ಶಿ ಅರುಣ್ ರೋಶನ್ ಡಿಸೋಜ, ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಅಧ್ಯಕ್ಷತೆಯನ್ನು ಅ.ಭಾ.ಅ.ಪ.ದ ಬಂಟ್ವಾಳ ಗೌರವಾಧ್ಯಕ್ಷ ರಾಜಾರಾಮ ನಾಯಕ್ ವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ರಮ್ಯಾ ಎಚ್ ಆರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಶಿಲ್ಪಾ ಜಿ. ತಿಮ್ಮಾಪುರ, ಬಂಟ್ವಾಳ ಘಟಕದ ಅಧ್ಯಕ್ಷ ರವೀಂದ್ರ ಕುಕ್ಕಾಜೆ, ಉಪಾಧ್ಯಕ್ಷರಾದ ಉಮಾ ಎನ್. ಸೋಮಯಾಜಿ, ಗಿರೀಶ್ ಮುಳಿಯಾಲ, ಸಂತೋಷ್ ಜೀವನ್ ಲೋಬೊ, ಖಜಾಂಚಿ ಪ್ರಶಾಂತ್ ಕೆ, ಜತೆ ಕಾರ್ಯದರ್ಶಿ ಶುಭಲತ ಉಪಸ್ಥಿತರಿದ್ದರು. ನ್ಯಾಯವಾದಿ ಆಶಾ ಸ್ವಾಗತಿಸಿದರು. ಶೈಲಜಾ ರಾಜೇಶ್ ಪ್ರಾರ್ಥಿಸಿದರು. ಗುರುರಾಜ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎಂ.ಸಿದ್ಧಕಟ್ಟೆ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ