ಫರಂಗಿಪೇಟೆ

ಫರಂಗಿಪೇಟೆಯಲ್ಲಿ ಅಪಘಾತ: ವಿಟ್ಲದ ವ್ಯಕ್ತಿ ಮೃತ

ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಇಳಿಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ವಿಟ್ಲದ ಜನಪ್ರಿಯ ಬಾಣಸಿಗರಾದ ಕಾಂತಡ್ಕ ಶಂಕರನಾರಾಯಣ ಭಟ್ (58) ಸಾವನ್ನಪ್ಪಿದ್ದಾರೆ.

ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಆಗಮಿಸುತ್ತಿದ್ದ ಅವರ ಬೈಕ್ ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಅಸು ನೀಗಿದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅವರು ಹೊಂದಿದ್ದರು. ವಿಟ್ಲ ಪರಿಸರದ ಪ್ರಖ್ಯಾತ ಬಾಣಸಿಗರಾಗಿದ್ದ ಅವರು, ಹಲವಾರು ದೇವಸ್ಥಾನಗಳ ದೊಡ್ಡ ಪ್ರಮಾಣದ ಅಡುಗೆಯನ್ನು ಮಾಡುವುದರಲ್ಲಿ ನಿಷ್ಣಾತರಾಗಿದ್ದರು. ವಿಟ್ಲ ಸಮೀಪ ನೆತ್ತರಕೆರೆ ಎಂಬಲ್ಲಿನ ಪಾಂಚಜನ್ಯ ಲೇಔಟ್ ನಲ್ಲಿ ವಾಸವಾಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ