ಪೊಳಲಿ ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಪಂಚಮ ವರ್ಷದ 72 ಗಂಟೆಗಳ ಅಹೋರಾತ್ರಿ ಏಕಾಹ ಭಜನಾ ಮಹೋತ್ಸವ

ಬಂಟ್ವಾಳ: ಪೊಳಲಿ ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಓಂಕಾರ ಶ್ರೀ ಅಖಿಲೇಶ್ವರ ಭಜನಾ ಮಂಡಳಿ  ವತಿಯಿಂದ ಪಂಚಮ ವರ್ಷದ 72 ಗಂಟೆಗಳ ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವದ ಸಮಾವೇಶಕ್ಕೆ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ್ ಸ್ವಾಮೀಜಿ, ಆರ್ ಎಸ್ ಎಸ್  ಪ್ರಮಖ ಡಾ. ಪ್ರಭಾಕರ ಭಟ್ ಕಲ್ಲಡ್ಕ  ಸಹಿತ ಗಣ್ಯರು ಪಾಲ್ಗೊಂಡರು.

 ಈ ಸಂದರ್ಭದಲ್ಲಿ ಇವರಿಬ್ಬರನ್ನು  ಪೂರ್ಣಕುಂಭದೊದಿಗೆ ಸ್ವಾಗತಿಸಲಾಯಿತು. ಶನಿವಾರ ಬೆಳಿಗ್ಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ  ಸ್ವಾಮೀಜಿ  ಹಾಗೂ ಕೊಡಿಮಜಲು ಅನಂತ ಪದ್ಮನಾಭ ಉಪಾದ್ಯಾಯ ದೀಪಪ್ರಜ್ವಲನೆಗೊಳಿಸಿ ಭಜನಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಕೆ. ರಾಮ್ ಭಟ್ ಪೊಳಲಿ,ಬೆಂಜನಪದವು ರಮೇಶ್ ದೇವಿ ಪಾತ್ರಿ, ಶ್ರೀ ಕ್ಷೇ. ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ,ಬಂಟ್ವಾಳ ಘಟಕದ  ಯೋಜನಾಧಿಕಾರಿ ಜಯಾನಂದ ಪಿ.,ಮೇಲ್ವಿಚಾರಕಿ ಮಮತ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಕಾರ್ಯದರ್ಶಿ ಜಯರಾಮ್ ನೆಲ್ಲಿತ್ತಾಯ, ರಘುನಾಥ ಉಳ್ಳಾಲ, ವೆಂಕಟೇಶ್ ನಾವಡ ಪೊಳಲಿ ಸಮಾವೇಶದಲ್ಲಿ ಭಾಗವಹಿಸಿದ್ದರು. ದೇವಸ್ಥಾನದ ಅರ್ಚಕ ವಾಸುದೇವ ಮಯ್ಯ ಅವರನ್ನು  ಗೌರವಿಸಲಾಯಿತು. ಭಜನಾ ಮಂಡಳಿಯ ಅಧ್ಯಕ್ಷ ಯಶೋಧರ ಅಡ್ಡೂರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೊಳಲಿ ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಪಂಚಮ ವರ್ಷದ 72 ಗಂಟೆಗಳ ಅಹೋರಾತ್ರಿ ಏಕಾಹ ಭಜನಾ ಮಹೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*