ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಸಂಗಮ

ಬಂಟ್ವಾಳ : ಭಗವಂತನನ್ನು ಅರಿಯಬೇಕಾದರೆ ಮಾನವ ಸ್ವತಃ ತನ್ನ ಅಸ್ತಿತ್ವವನ್ನು ಅರ್ಥ ಮಾಡಿಕೊಂಡರೆ ಸಾಕು. ತನ್ನ ಸೃಷ್ಟಿ, ತನ್ನ ದೇಹದ ವಿವಿಧ ಅಂಗಾಂಗಗಳ ಸಹಿತ ಲೋಕದಲ್ಲಿ ದೊರೆತ ಅನುಗ್ರಗಗಳನ್ನು ದಯಪಾಲಿಸಿದ ಒಂದು ಶಕ್ತಿಯೇ ಭಗವಂತ. ಎಂದು ಬಂಟ್ವಾಳ ವಲಯ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು ಹೇಳಿದರು
ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಚೇರಿಯಲ್ಲಿ ನಡೆದ ಶಂಸುಲ್ ಉಲಮಾ (ಖ.ಸಿ) ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಸಂಗಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಲ್ಲಾಹನ ಆದೇಶಗಳನ್ನು ಶಿರಸಾ ವಹಿಸಿ ಜೀವಿಸಿ, ಅವನ ಸಂತೃಪ್ತಿ ಗಳಿಸಿ ಮರಣ ಹೊಂದಿದ ಅಲ್ಲಾಹನ ಇಷ್ಟ ದಾಸರನ್ನು ಪ್ರೀತಿಸಿ ಗೌರವಿಸಿದಾಗ ಅಲ್ಲಾಹನ ಸಾಮೀಪ್ಯ ಸಂಪಾದಿಸಲು ಸಾಧ್ಯ ಎಂದರು.
ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ ಅಧ್ಯಕ್ಷತೆ ವಹಿಸಿದ್ದರು. ಖಲೀಲ್ ದಾರಿಮಿ ಉದ್ಘಾಟಿಸಿದರು. ಪಾಣೆಮಂಗಳೂರು ಕ್ಲಸ್ಟರ್ ಅಧ್ಯಕ್ಷ ಅಬೂಸ್ವಾಲಿಹ್ ಫೈಝಿ ಅನುಸ್ಮರಣಾ ಭಾಷಣಗೈದರು. ಪ್ರಮುಖರಾದ ಅಬ್ದುಲ್ ಖಾದರ್ ಹಾಜಿ ಬೋಗೋಡಿ, ಪಿ.ಬಿ. ಹಾಮದ್ ಹಾಜಿ ಬಂಗ್ಲೆಗುಡ್ಡೆ, ಅಬ್ದುಲ್ ಖಾದರ್ ಮದನಿ. ಅಬೂಬಕರ್ ಮದನಿ, ಹನೀಫ್ ಯಮಾನಿ, ಅಬ್ದುಲ್ಲಾಹ್ ರಬ್ಬಾನಿ, ಅಬೂಬಕರ್ ಹಾಜಿ ಎನ್.ಬಿ., ಅಬ್ದುಲ್ ಮಜೀದ್ ಬೋಳಂಗಡಿ, ಇಸಾಕ್ ಫೇಶನ್ ವೇರ್, ಮುಹಮ್ಮದ್ ಶಫೀಕ್, ಬಶೀರ್ ಕೆ4, ರಫೀಕ್ ಇನೋಳಿ, ಸಿ.ಪಿ. ಶಾಕಿರ್, ಅಬ್ದುಲ್ ಜಬ್ಬಾರ್ ಬುರ್ಖಾ, ಸಲಾಂ ಸೆಂಟರಿಂಗ್, ಸುಲೈಮಾನ್ ಬೋಳಂಗಡಿ, ಅಬ್ದುಲ್ ಖಾದರ್ ಪೈಂಟರ್,  ಹನೀಫ್ ಡ್ರೈ ಫಿಶ್, ಅಬ್ದುಲ್ ಮುತ್ತಲಿಬ್, ಮುಹಮ್ಮದ್ ಬಂಗ್ಲೆಗುಡ್ಡೆ ಮೊದಲಾದವರು ಭಾಗವಹಿಸಿದ್ದರು.
ಶಾಖಾ ಕಾರ್ಯದರ್ಶಿ ಅಬ್ದುಲ್ ಬಶೀರ್ ಎನ್. ಸ್ವಾಗತಿಸಿ, ಅಬ್ದುಲ್ ಅಝೀಝ್ ಪಿ.ಐ. ವಂದಿಸಿದರು. ಇದೇ ವೇಳೆ ಇರ್ಶಾದ್ ದಾರಿಮಿ ನೇತೃತ್ವದಲ್ಲಿ ಶಂಸುಲ್ ಉಲಮಾ ಮೌಲಿದ್ ನಡೆಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಸಂಗಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*