ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಸಂಗಮ

ಬಂಟ್ವಾಳ : ಭಗವಂತನನ್ನು ಅರಿಯಬೇಕಾದರೆ ಮಾನವ ಸ್ವತಃ ತನ್ನ ಅಸ್ತಿತ್ವವನ್ನು ಅರ್ಥ ಮಾಡಿಕೊಂಡರೆ ಸಾಕು. ತನ್ನ ಸೃಷ್ಟಿ, ತನ್ನ ದೇಹದ ವಿವಿಧ ಅಂಗಾಂಗಗಳ ಸಹಿತ ಲೋಕದಲ್ಲಿ ದೊರೆತ ಅನುಗ್ರಗಗಳನ್ನು ದಯಪಾಲಿಸಿದ ಒಂದು ಶಕ್ತಿಯೇ ಭಗವಂತ. ಎಂದು ಬಂಟ್ವಾಳ ವಲಯ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು ಹೇಳಿದರು
ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಕಚೇರಿಯಲ್ಲಿ ನಡೆದ ಶಂಸುಲ್ ಉಲಮಾ (ಖ.ಸಿ) ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಸಂಗಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಲ್ಲಾಹನ ಆದೇಶಗಳನ್ನು ಶಿರಸಾ ವಹಿಸಿ ಜೀವಿಸಿ, ಅವನ ಸಂತೃಪ್ತಿ ಗಳಿಸಿ ಮರಣ ಹೊಂದಿದ ಅಲ್ಲಾಹನ ಇಷ್ಟ ದಾಸರನ್ನು ಪ್ರೀತಿಸಿ ಗೌರವಿಸಿದಾಗ ಅಲ್ಲಾಹನ ಸಾಮೀಪ್ಯ ಸಂಪಾದಿಸಲು ಸಾಧ್ಯ ಎಂದರು.
ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ ಅಧ್ಯಕ್ಷತೆ ವಹಿಸಿದ್ದರು. ಖಲೀಲ್ ದಾರಿಮಿ ಉದ್ಘಾಟಿಸಿದರು. ಪಾಣೆಮಂಗಳೂರು ಕ್ಲಸ್ಟರ್ ಅಧ್ಯಕ್ಷ ಅಬೂಸ್ವಾಲಿಹ್ ಫೈಝಿ ಅನುಸ್ಮರಣಾ ಭಾಷಣಗೈದರು. ಪ್ರಮುಖರಾದ ಅಬ್ದುಲ್ ಖಾದರ್ ಹಾಜಿ ಬೋಗೋಡಿ, ಪಿ.ಬಿ. ಹಾಮದ್ ಹಾಜಿ ಬಂಗ್ಲೆಗುಡ್ಡೆ, ಅಬ್ದುಲ್ ಖಾದರ್ ಮದನಿ. ಅಬೂಬಕರ್ ಮದನಿ, ಹನೀಫ್ ಯಮಾನಿ, ಅಬ್ದುಲ್ಲಾಹ್ ರಬ್ಬಾನಿ, ಅಬೂಬಕರ್ ಹಾಜಿ ಎನ್.ಬಿ., ಅಬ್ದುಲ್ ಮಜೀದ್ ಬೋಳಂಗಡಿ, ಇಸಾಕ್ ಫೇಶನ್ ವೇರ್, ಮುಹಮ್ಮದ್ ಶಫೀಕ್, ಬಶೀರ್ ಕೆ4, ರಫೀಕ್ ಇನೋಳಿ, ಸಿ.ಪಿ. ಶಾಕಿರ್, ಅಬ್ದುಲ್ ಜಬ್ಬಾರ್ ಬುರ್ಖಾ, ಸಲಾಂ ಸೆಂಟರಿಂಗ್, ಸುಲೈಮಾನ್ ಬೋಳಂಗಡಿ, ಅಬ್ದುಲ್ ಖಾದರ್ ಪೈಂಟರ್,  ಹನೀಫ್ ಡ್ರೈ ಫಿಶ್, ಅಬ್ದುಲ್ ಮುತ್ತಲಿಬ್, ಮುಹಮ್ಮದ್ ಬಂಗ್ಲೆಗುಡ್ಡೆ ಮೊದಲಾದವರು ಭಾಗವಹಿಸಿದ್ದರು.
ಶಾಖಾ ಕಾರ್ಯದರ್ಶಿ ಅಬ್ದುಲ್ ಬಶೀರ್ ಎನ್. ಸ್ವಾಗತಿಸಿ, ಅಬ್ದುಲ್ ಅಝೀಝ್ ಪಿ.ಐ. ವಂದಿಸಿದರು. ಇದೇ ವೇಳೆ ಇರ್ಶಾದ್ ದಾರಿಮಿ ನೇತೃತ್ವದಲ್ಲಿ ಶಂಸುಲ್ ಉಲಮಾ ಮೌಲಿದ್ ನಡೆಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಸಮಸ್ತ ನೇತಾರರ ಅನುಸ್ಮರಣಾ ಸಂಗಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*