ಬಂಟ್ವಾಳ

ಚುನಾವಣಾ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರಿಗೆ ಸೂಕ್ತ ರಕ್ಷಣೆ: ಸಂಘ ಮನವಿ

ಬಂಟ್ವಾಳ: ತುಂಬೆ ಗ್ರಾ.ಪಂ.ನ ಸಹಾಯಯಕ ಚುನಾವಣಾಧಿಕಾರಿ, ಪಂಚಾಯಿತಿ  ಪಿಡಿಒ ಚಂದ್ರಾವತಿ ಅವರಿಗೆ ಅವಹೇಳನಕಾರಿಯಾಗಿ ನಿಂದಿಸಿ, ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿರುವ  ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ ವತಿಯಿಂದ ಸೋಮವಾರ ಸಂಜೆ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಮುಂದಿನ ದಿನಗಳಲ್ಲಿ ಚುನಾವಣೆ ನಡೆಯುವ ಸಂದರ್ಭವೂ ಚುನಾವಣಾ ಕರ್ತವ್ಯದಲ್ಲಿರುವ ಎಲ್ಲಾ ನೌಕರರಿಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಕಾರ್ಯದರ್ಶಿ ಸಂತೋಷ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಜೆ.ಜನಾರ್ದನ, ಉಪಾಧ್ಯಕ್ಷ ಮಂಜುನಾಥ್ ಕೆ.ಎಚ್., ಸದಸ್ಯರಾದ ಲಕ್ಷ್ಮಣ್, ಜಯರಾಮ್, ಸೀತರಾಮ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts