ಪೋಳ್ಯದಲ್ಲಿ ರಸ್ತೆ ಅಪಘಾತ: ಹಿರಿಯ ಆರೆಸ್ಸೆಸ್ ಮುಖಂಡ ವೆಂಕಟರಮಣ ಹೊಳ್ಳ ನಿಧನ

ಬಂಟ್ವಾಳ:  ಪುತ್ತೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಪೋಳ್ಯ ಎಂಬಲ್ಲಿ ಮಂಗಳವಾರ ನಸುಕಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ರಾಷ್ಟ್ರೀ ಸ್ವಯಂಸೇವಕ ಸಂಘದ ಪ್ರಮುಖರೂ, ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿರುವ ವೆಂಕಟರಮಣ ಹೊಳ್ಳ (60) ಮೃತಪಟ್ಟಿದ್ದಾರೆ.

ಸೋಮವಾರ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ಅವರು, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭ,ಪೋಳ್ಯದಲ್ಲಿ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಬೈಕ್ ಬಿದ್ದಿತ್ತು.

ಆರೆಸ್ಸೆಸ್ ಸ್ವಯಂಸೇವಕರಾಗಿ ಬಾಲ್ಯದಿಂದಲೇ ಗುರುತಿಸಿಕೊಂಡಿದ್ದ ಅವರು ರಾಷ್ಟ್ರೀಯ ನಾಯಕರ ಗಮನವನ್ನೂ ಸೆಳೆದವರು. ಆರೆಸ್ಸೆಸ್ ನ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಹೊಳ್ಳರು, ಸರಳ ಜೀವಿಯಾಗಿ ಪಾದರಕ್ಷೆಗಳನ್ನು ಧರಿಸದೆ, ಸರಳ ಶ್ವೇತವಸ್ತ್ರದ ಉಡುಗೆಯೊಂದಿಗೆ ಸಂಚರಿಸುತ್ತಿದ್ದರು. ಇತ್ತೀಚೆಗೆ ಗ್ರಾಮವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಆತ್ಮನಿರ್ಭರರಾಗುವ ಉದ್ಯೋಗ ತರಬೇತಿಯನ್ನು ಆಯೋಜಿಸುವ ಮೂಲಕ ಗಮನ ಸೆಳೆದಿದ್ದರು.

ಜಾಹೀರಾತು

ಹೊಳ್ಳರು, ದಶಕಗಳಿಂದಲೇ ಹಲವು ತರುಣರನ್ನು ಹುಡುಕಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೇರ್ಪಡೆ ಮಾಡುತ್ತಿದ್ದರು. ಹೀಗೆಯೇ ಸೇರಿದವರ ಪೈಕಿ ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ವೆಂಕಟರಮಣ ಹೊಳ್ಳರು ಗುರು, ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಅದೇ ರೀತಿ ಸಾವಿರಾರು ಯುವಕರಿಗೆ ಹೊಳ್ಳರು ಮಾರ್ಗದರ್ಶನ ನೀಡಿದ್ದಾರೆ. ಬಿ.ಸಿ.ರೋಡಿನ ಹೃದಯಭಾಗದಲ್ಲಿಯೇ ಶುದ್ಧ ಸಾವಯವ ಕೃಷಿಯನ್ನು ಮಾಡುವ ಮೂಲಕ ಸಾವಯವ ಪ್ರಗತಿಪರ ಕೃಷಿಕರಾಗಿಯೂ ಹೊಳ್ಳರು ಗಮನ ಸೆಳೆದವರು.

ಅವರ ನಿಧನಕ್ಕೆ ಆರೆಸ್ಸೆಸ್ ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೋಳ್ಯದಲ್ಲಿ ರಸ್ತೆ ಅಪಘಾತ: ಹಿರಿಯ ಆರೆಸ್ಸೆಸ್ ಮುಖಂಡ ವೆಂಕಟರಮಣ ಹೊಳ್ಳ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*