ವಿಟ್ಲ

ಮೆಸ್ಕಾಂ ನೀತಿ ವಿರೋಧಿಸಿ ವಿಟ್ಲದಲ್ಲಿ ಪ್ರತಿಭಟನೆ

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮೆಸ್ಕಾಂ ನೀತಿಯನ್ನು ವಿರೋಧಿಸಿ ವಿಟ್ಲದಲ್ಲಿ ಪ್ರತಿಭಟನೆ ಬುಧವಾರ ನಡೆಯಿತು. ಮುಖಂಡರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ಸಾಮಾನ್ಯರು ಸೋತಾಗ ಸರ್ಕಾರ ಅವರ ನೆರವಿಗೆ ಬರಬೇಕು. ಅದನ್ನು ಬಿಟ್ಟು ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ದೂರಿದರು. ಜಿಲ್ಲಾ ಕಾರ್ಮಿಕ ಮುಖಂಡ ಬಿ.ಎಂ ಭಟ್ ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ ಎಂದರು. ವಿನೋದ್ ಭಟ್ ಪಾದೆಕಲ್ಲು ಅವರು ಮೆಸ್ಕಾಂ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕವಾಗಿ ಕೆಲವು ಪ್ರಶ್ನೆಗಳನ್ನು ಕೇಳಿದರು. ಇಲಾಖಾಧಿಕಾರಿಗಳು ಉತ್ತರ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ರೈತ ಸಂಘದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರು, ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಪುಚ್ಚತ್ತಡ್ಕ, ಗೌರವಾಧ್ಯಕ್ಷ ಹರ್ಷಕುಮಾರ್ ಹೆಗ್ಡೆ, ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts