ವಿಟ್ಲ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಸ್ತಬ್ದ: ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಯು.ಟಿ.ಖಾದರ್

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ಬದಲಾಗಿ ಕಾಂಗ್ರೆಸ್ ಜಾರಿಗೆ ತಂದ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಲಾಗಿದೆ ಎಂದು ವಿಟ್ಲದಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ಮತದಾರರು ನೀಡುವ ಪ್ರತಿಯೊಂದು ಮತವೂ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ ಎಂದರು. ರೇಶನ್ ಕಾರ್ಡ್ ವಿತರಣೆಯಾಗಿಲ್ಲ. ಮನೆ ಹಸ್ತಾಂತರ ಮಾಡಿಲ್ಲ. ಪಿಂಚಣಿ ಕೂಡಾ ಬಡವರಿಗೆ ದೊರೆಯುತ್ತಿಲ್ಲ. ಮರಾಠಿ ನಿಗಮ ಸ್ಥಾಪಿಸಲು ನಮ್ಮ ವಿರೋಧವಿಲ್ಲ. ಆದರೆ ಗಡಿಭಾಗದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದಾದ ಬಳಿಕ ನಿಗಮ ಮಂಡಳಿ ಸ್ಥಾಪನೆ ಮಾಡಲಿ ಎಂದು ಆಗ್ರಹಿಸಿದರು. ಯಾವುದೇ ಘಟನೆ ನಡೆದಾಗ ಕಾಂಗ್ರೆಸ್ ಪಕ್ಷವನ್ನು ದೂರುವುದು ಬಿಜೆಪಿಗೆ ಮಾಮೂಲಾಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರಿಗೆ ಅಲ್ಲಿ ತ್ರೀಶಂಕು ಸ್ಥಿತಿ ನಿರ್ಮಾಣಗೊಂಡು ಮತ್ತೆ ನಮ್ಮ ಪಕ್ಷಕ್ಕೆ ಮರಳಲಿದ್ದಾರೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಲೀಂ, ಗಿರೀಶ್ ಶೆಟ್ಟಿ, ಲತೀಫ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿವಿಧ ವಲಯ ಕಾಂಗ್ರೆಸ್ ಅಧ್ಯಕ್ಷರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ