ಆರ್.ಎನ್.ಶೆಟ್ಟಿ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ: ರಮಾನಾಥ ರೈ

ಬಂಟ್ವಾಳ: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ‌ ಸಂಸ್ಥೆಗಳ ಸಮೂಹದ ಸ್ಥಾಪಕ‌ ಆರ್.ಎನ್. ಶೆಟ್ಟಿ ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಆತ್ಮೀಯರಲ್ಲಿ ಒಬ್ಬರಾಗಿದ್ದ ಅವರ ಅಗಲಿಕೆಯಿಂದ ನನಗೆ ವೈಯಕ್ತಿಕವಾಗಿ ಅತೀವ ನೋವುಂಟಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ರಾಜ್ಯದ ಶಿಕ್ಷಣ ಮತ್ತು ಉದ್ಯಮ ರಂಗಗಳಲ್ಲಿ ಗಣನೀಯ ಸಾಧನೆ ಮಾಡಿದ್ದರು.‌ ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪೂರ್ವವಾದುದು. ರಾಜ್ಯದ ಹಲವು ಜಲಾಶಯಗಳ ನಿರ್ಮಾಣ ಕಾಮಗಾರಿಗಳನ್ನು ನಿರ್ವಹಿಸಿದ್ದ ಶೆಟ್ಟಿ ಅವರು, ಕರ್ನಾಟಕದ ಪ್ರಗತಿಗೆ ಮಹತ್ವದ ಕೊಡುಗೆಗಳನ್ನು ನೀಡಿದವರು ಎಂದವರು ಶ್ರದ್ಧಾಂಜಲಿ ವ್ಯಕ್ತಪಡಿಸಿದ್ದಾರೆ.

ಕೊಡುಗೈ ದಾನಿಯಾಗಿದ್ದ ಆರ್.ಎನ್. ಶೆಟ್ಟಿ ಅವರು ಜಾತಿ, ಮತಗಳ ಭೇದವಿಲ್ಲದೆ ಸಹಾಯ ಕೇಳಿ ಬಂದ ಎಲ್ಲರಿಗೂ ನೆರವು ನೀಡುವ ಗುಣ ಹೊಂದಿದ್ದವರು. ಬಂಟ ಸಮುದಾಯದ ಪ್ರಗತಿಗೆ ಅವರ ಕೊಡುಗೆ ಅಪಾರವಾದುದು. ಜನಸ್ನೇಹಿ, ದೂರದೃಷ್ಟಿಯ ವ್ಯಕ್ತಿಯಾಗಿದ್ದ ಆರ್.ಎನ್.‌ಶೆಟ್ಟಿ ಅವರನ್ನು ಕಳೆದುಕೊಂಡು ನಾಡು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಮತ್ತು ಕುಟುಂಬದವರಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ರೈ ಕಂಬನಿ ಮಿಡಿದಿದ್ದಾರೆ.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆರ್.ಎನ್.ಶೆಟ್ಟಿ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*